ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ.
ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ ಹಾಗೂ ಚಾರ್ ಧಮ್ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂ ಮತ್ತು ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ ಸಹಾಯಧನ ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮುಜರಾಯಿ ಇಲಾಖೆ ಪ್ರಕಟಿಸಿದೆ.
ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್ಲೋಡ್ ಮಾಡಬೇಕು. 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. 45 ವರ್ಷ ಮೇಲ್ಪಟ್ಟಿರುವ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್ಲೋಡ್ ಮಾಡಬೇಕು. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.
ಇನ್ನೂ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳಲಿರುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್.1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು. 18 ವರ್ಷ ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು ಎಂದು ಮಾಹಿತಿ ನೀಡಿದೆ.
ಮಾನಸ ಸರೋವರ ಯಾತ್ರಾರ್ಥಿಗಳು ಈ ಸಹಾಯಧನದ ಮೂಲಕ ಯಾತ್ರೆ ಕೈಗೊಳ್ಳಬಹುದಾಗಿದೆ. ಹಣವಿಲ್ಲದೇ ಯಾತ್ರೆಗೆ ಹಿಂದೇಟು ಹಾಕುತ್ತಿರುವ ಜನರಿಗೆ ಈ ಸಹಾಯಧನದಿಂದ ಉತ್ತಮ ಅನುಕೂಲ ಆಗಲಿದೆ ಎನ್ನಲಾಗುತ್ತಿದೆ.
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…