ದೇಶ- ವಿದೇಶ

ಮಣಿಪುರ | 8 ಉಗ್ರರ ಬಂಧನ

ಇಂಫಾಲ : ಇಂಫಾಲ ಪಶ್ಚಿಮ, ಬಿಷ್ಣುಪುರ, ತೆಂಗ್ನೌಪಾಲ್ ಮತ್ತು ಚಾಂಡೆಲ್ ಜಿಲ್ಲೆಗಳಿಂದ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಎಂಟು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ನಿಷೇಧಿತ ಕಾಂಗೈ ಪಾಕ್ ಕಮ್ಯುನಿಸ್ಟ್ ಪಕ್ಷದ (ತೈಬಂಗನ್ಬಾ) ಇಬ್ಬರು ಕಾರ್ಯಕರ್ತರನ್ನು ಇಂಫಾಲ ಪಶ್ಚಿಮ ಜಿಲ್ಲೆಯ ಟಕ್ಯೆಲ್ ಖೊಂಗ್ಬಾಲ್ ಮತ್ತು ಖುಯಾಥೋಂಗ್ ಪ್ರದೇಶದಿಂದ ಬಂಧಿಸಲಾಗಿದೆ.

ಟೆಂಗ್ನೌಪಾಲ್ ಜಿಲ್ಲೆಯ ಕಾಡಿನಿಂದ ಪ್ರಿಪಾಕ್ ಮತ್ತು ಪಿಎಲ್‌ಎ ಸಂಘಟನೆಯ ತಲಾ ಒಬ್ಬ ಉಗ್ರನನ್ನು ಬಂಧಿಸಲಾಗಿದೆ. ಇಂಫಾಲ ಪಶ್ಚಿಮ ಜಿಲ್ಲೆಯ ತಬುಂಗ್ಖೋಕ್ ಸಗೆ ಇಟ್ಟಿಗೆ ಮೈದಾನದಿಂದ ಉಗ್ರನನ್ನು ಬಂಧಿಸಲಾಗಿದೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ (ಕೆಸಿಪಿ) ಯ ಒಬ್ಬ ಉಗ್ರನನ್ನು ಬುಧವಾರ ಬಿಷ್ಣುಪುರ ಜಿಲ್ಲೆಯಿಂದ ಬಂಧಿಸಲಾಗಿದೆ.

ಚಂದೇಲ್ ಜಿಲ್ಲೆಯ ಸುಗ್ನು-ಚಾಂಡೆಲ್ ರಸ್ತೆಯಿಂದ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ಒಬ್ಬ ಉಗ್ರನನ್ನು ಬಂಧಿಸಲಾಗಿದೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕೆಸಿಪಿ (ಪಿಡಬ್ಲ್ಯೂಜಿ) ಉಗ್ರಗಾಮಿಯನ್ನು ಇಂಫಾಲ್ ಪಶ್ಚಿಮ ಜಿಲ್ಲೆಯ ಮಹಾರಬಿ ಪ್ರದೇಶದಿಂದ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

1 hour ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

2 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

2 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

2 hours ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

2 hours ago