ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ದಾಳಿ ನಡೆದಾಗ ಸಿಎಂ ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿತ್ತು. ಈ ವೇಳೆ ಭದ್ರತಾ ಪಡೆಗಳ ವಾಹನಗಳ ಮೇಲೆ ಹಲವು ಬಾರಿ ಗುಂಡಿನ ದಾಳಿ ನಡೆಸಲಾಯಿತು. ಭದ್ರತಾಪಡೆ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಸಿಎಂ ಇರಲಿಲ್ಲ. ಈ ವೇಳೆ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 53 ರ ಉದ್ದಕ್ಕೂ ಕೋಟ್ಲೆನ್ ಗ್ರಾಮದ ಬಳಿ ಇನ್ನೂ ದಾಳಿ-ಪ್ರತಿದಾಳಿ ನಡೆಯುತ್ತಿದೆ ಎನ್ನಲಾಗಿದೆ.
ಹೊಂಚುದಾಳಿಯ ವೇಳೆ ಇಬ್ಬರು ಸಿಬ್ಬಂದಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ದೆಹಲಿಯಿಂದ ಇಂಫಾಲ್ಗೆ ಹಿಂದಿರುಗುತ್ತಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಇತ್ತೀಚಿನ ಹಿಂಸಾತ್ಮಕ ಘಟನೆಗಳನ್ನು ಅವಲೋಕಿಸಲು ಜಿರಿಬಾಮ್ಗೆ ಭೇಟಿ ನೀಡಲು ಯೋಜಿಸಿದ್ದರು. ಶಂಕಿತ ಉಗ್ರರು ಶನಿವಾರ(ಜೂ.8) ಎರಡು ಪೊಲೀಸ್ ಔಟ್ಪೋಸ್ಟ್ಗಳು, ಅರಣ್ಯ ಬೀಟ್ ಕಚೇರಿ ಮತ್ತು 70 ಮನೆಗಳಿಗೆ ಬೆಂಕಿ ಹಚ್ಚಿದ್ದರು.
ಹಿಂಸಾಚಾರ ಪೀಡಿತ ಜಿರಬಾಮ್ ಜಿಲ್ಲೆಯು ರಾಜ್ಯ ರಾಜಧಾನಿ ಇಂಫಾಲ್ನಿಂದ 220 ಕಿ.ಮೀ ದೂರದಲ್ಲಿದೆ. ಇದು ಅಸ್ಸಾಂ ಗಡಿ ಪ್ರದೇಶದ ಸಮೀಪದಲ್ಲಿದೆ. ಕುಕಿ ಸಮುದಾಯ ಬಹುಪಾಲು ಮಂದಿ ಇಲ್ಲಿ ವಾಸಿಸುತ್ತಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…