ದೇಶ- ವಿದೇಶ

ಭಾರತ – ಪಾಕ್‌ ಕ್ರಿಕೆಟ್‌ ಸಂಬಂಧಕ್ಕೆ ಮರುಜೀವ ತುಂಬಿದ್ದ ಮನಮೋಹನ್‌ ಸಿಂಗ್‌

ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯವನ್ನು ಪಾಕಿಸ್ತಾನ ಪ್ರಧಾನಿ ಜೊತೆ ಕುಳಿತು ವೀಕ್ಷಿಸುವ ಮೂಲಕ ಉಭಯ ದೇಶಗಳ ನಡುವೆ ಹಳಸಿದ್ದ ಕ್ರಿಕೆಟ್‌ ಸಂಬಂಧಕ್ಕೆ ಮತ್ತೆ ಜೀವ ತುಂಬಿದ್ದರು.

ಭಾರತ ಹಾಗೂ ಪಾಕಿಸ್ತಾನ ನಡುವಿನ ಮ್ಯಾಚ್‌ ಎಂದರೆ ಎರಡು ದೇಶದ ಅಭಿಮಾನಿಗಳಿಗೆ ಭಾವನಾತ್ಮಕ ವಿಚಾರ. ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ನಡುವೆ ರಾಜಕೀಯ ವಿಚಾರ ತಲೆದೂರಿ ಐಸಿಸಿ, ಏಷ್ಯಾಕಪ್‌ನಲ್ಲಿ ಮಾತ್ರ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಆದರೆ ಮನಮೋಹನ್‌ ಸಿಂಗ್‌ ಆಡಳಿತದ ಅವಧಿಯಲ್ಲಿ ಎರಡು ದೇಶಗಳ ನಡುವಿನ ಕ್ರಿಕೆಟ್‌ ಸಂಬಂಧ ಸುಧಾರಣೆಯಾಗಿತ್ತು.

2008 ರಲ್ಲಿ ಮುಂಬೈ ದಾಳಿ ಸಂಭವಿಸಿತ್ತು. ಆ ದಾಳಿಯ ನಂತರ ಎರಡು ದೇಶಗಳ ನಡುವೆ ಕ್ರಿಕೆಟ್‌ ಸಂಬಂಧ ಹಳಸಿತ್ತು. ಈಗ ಎರಡು ದೇಶಗಳ ನಡುವೆ ಇರುವ ವೈರತ್ವದ ಹಾಗೇಯೇ ಹಾಗಲೂ ಸಹ ದ್ವೇಷದ ಭಾವನೆ ಉಭಯ ದೇಶಗಳಲ್ಲಿತ್ತು. ಈ ದ್ವೇಷವನ್ನು ಹೋಗಲಾಡಿಸಿ ಎರಡು ದೇಶಗಳ ಕ್ರಿಕೆಟ್‌ ಸಂಬಂಧಕ್ಕೆ ಮರುಜೀವ ತುಂಬಿದ್ದರು.

2011ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯನ್ನು ಭಾರತದ ಜೊತೆ ಶ್ರೀಲಂಕಾ, ಬಾಂಗ್ಲಾದೇಶ ದೇಶಗಳು ಅತಿಥ್ಯ ವಹಿಸಿದ್ದವು. ಈ ಸಂದರ್ಭದಲ್ಲಿ ಪಾಕ್‌ ಪ್ರಧಾನಿ ಯೂಸಫ್‌ ಗಿಲಾನಿ ಅವರಿಗೆ ಆಹ್ವಾನ ನೀಡಿ ಪಂದ್ಯ ವೀಕ್ಷಣೆ ಮಾಡುವಂತೆ ಮನವಿ ಮಾಡಿದ್ದರು.

ಮೊಹಾಲಿಯಲ್ಲಿ ಎರಡು ದೇಶಗಳ ನಡುವೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಇಬ್ಬರು ನಾಯಕರು ಎರಡು ತಂಡದ ಆಟಗಾರರಿಗೆ ಕೈ ಕುಲುಕಿ ಶುಭ ಹಾರೈಸಿ ಒಟ್ಟಿಗೆ ಕುಳಿತು ಪಂದ್ಯ ವೀಕ್ಷಿಸಿದ್ದರು.

ನಂತರ 2012ರಲ್ಲಿ ಎರಡು ದೇಶಗಳ ನಡುವೆ ದ್ವಿಪಕ್ಷಿಯ ಸರಣಿ ಆಯೋಜಿಸುವಲ್ಲಿ ಮನಮೋಹನ್‌ ಸಿಂಗ್‌ ಪ್ರಮುಖ ಪಾತ್ರ ವಹಿಸಿದ್ದರು. 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕ್‌ ಜಯಿಸಿದರೆ, 2 ಪಂದ್ಯಗಳ ಟಿ20 ಸರಣಿ ಸಮಬಲಗೊಂಡಿತ್ತು. ಇದೇ ಎರಡು ದೇಶಗಳ ನಡುವಿನ ಕೊನೆಯ ಸರಣಿಯಾಗಿದೆ.

andolana

Recent Posts

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

8 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

1 hour ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

3 hours ago