ದೇಶ- ವಿದೇಶ

ಭಾರತ – ಪಾಕ್‌ ಕ್ರಿಕೆಟ್‌ ಸಂಬಂಧಕ್ಕೆ ಮರುಜೀವ ತುಂಬಿದ್ದ ಮನಮೋಹನ್‌ ಸಿಂಗ್‌

ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯವನ್ನು ಪಾಕಿಸ್ತಾನ ಪ್ರಧಾನಿ ಜೊತೆ ಕುಳಿತು ವೀಕ್ಷಿಸುವ ಮೂಲಕ ಉಭಯ ದೇಶಗಳ ನಡುವೆ ಹಳಸಿದ್ದ ಕ್ರಿಕೆಟ್‌ ಸಂಬಂಧಕ್ಕೆ ಮತ್ತೆ ಜೀವ ತುಂಬಿದ್ದರು.

ಭಾರತ ಹಾಗೂ ಪಾಕಿಸ್ತಾನ ನಡುವಿನ ಮ್ಯಾಚ್‌ ಎಂದರೆ ಎರಡು ದೇಶದ ಅಭಿಮಾನಿಗಳಿಗೆ ಭಾವನಾತ್ಮಕ ವಿಚಾರ. ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ನಡುವೆ ರಾಜಕೀಯ ವಿಚಾರ ತಲೆದೂರಿ ಐಸಿಸಿ, ಏಷ್ಯಾಕಪ್‌ನಲ್ಲಿ ಮಾತ್ರ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಆದರೆ ಮನಮೋಹನ್‌ ಸಿಂಗ್‌ ಆಡಳಿತದ ಅವಧಿಯಲ್ಲಿ ಎರಡು ದೇಶಗಳ ನಡುವಿನ ಕ್ರಿಕೆಟ್‌ ಸಂಬಂಧ ಸುಧಾರಣೆಯಾಗಿತ್ತು.

2008 ರಲ್ಲಿ ಮುಂಬೈ ದಾಳಿ ಸಂಭವಿಸಿತ್ತು. ಆ ದಾಳಿಯ ನಂತರ ಎರಡು ದೇಶಗಳ ನಡುವೆ ಕ್ರಿಕೆಟ್‌ ಸಂಬಂಧ ಹಳಸಿತ್ತು. ಈಗ ಎರಡು ದೇಶಗಳ ನಡುವೆ ಇರುವ ವೈರತ್ವದ ಹಾಗೇಯೇ ಹಾಗಲೂ ಸಹ ದ್ವೇಷದ ಭಾವನೆ ಉಭಯ ದೇಶಗಳಲ್ಲಿತ್ತು. ಈ ದ್ವೇಷವನ್ನು ಹೋಗಲಾಡಿಸಿ ಎರಡು ದೇಶಗಳ ಕ್ರಿಕೆಟ್‌ ಸಂಬಂಧಕ್ಕೆ ಮರುಜೀವ ತುಂಬಿದ್ದರು.

2011ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯನ್ನು ಭಾರತದ ಜೊತೆ ಶ್ರೀಲಂಕಾ, ಬಾಂಗ್ಲಾದೇಶ ದೇಶಗಳು ಅತಿಥ್ಯ ವಹಿಸಿದ್ದವು. ಈ ಸಂದರ್ಭದಲ್ಲಿ ಪಾಕ್‌ ಪ್ರಧಾನಿ ಯೂಸಫ್‌ ಗಿಲಾನಿ ಅವರಿಗೆ ಆಹ್ವಾನ ನೀಡಿ ಪಂದ್ಯ ವೀಕ್ಷಣೆ ಮಾಡುವಂತೆ ಮನವಿ ಮಾಡಿದ್ದರು.

ಮೊಹಾಲಿಯಲ್ಲಿ ಎರಡು ದೇಶಗಳ ನಡುವೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಇಬ್ಬರು ನಾಯಕರು ಎರಡು ತಂಡದ ಆಟಗಾರರಿಗೆ ಕೈ ಕುಲುಕಿ ಶುಭ ಹಾರೈಸಿ ಒಟ್ಟಿಗೆ ಕುಳಿತು ಪಂದ್ಯ ವೀಕ್ಷಿಸಿದ್ದರು.

ನಂತರ 2012ರಲ್ಲಿ ಎರಡು ದೇಶಗಳ ನಡುವೆ ದ್ವಿಪಕ್ಷಿಯ ಸರಣಿ ಆಯೋಜಿಸುವಲ್ಲಿ ಮನಮೋಹನ್‌ ಸಿಂಗ್‌ ಪ್ರಮುಖ ಪಾತ್ರ ವಹಿಸಿದ್ದರು. 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕ್‌ ಜಯಿಸಿದರೆ, 2 ಪಂದ್ಯಗಳ ಟಿ20 ಸರಣಿ ಸಮಬಲಗೊಂಡಿತ್ತು. ಇದೇ ಎರಡು ದೇಶಗಳ ನಡುವಿನ ಕೊನೆಯ ಸರಣಿಯಾಗಿದೆ.

andolana

Recent Posts

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…

4 mins ago

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

34 mins ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

39 mins ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

43 mins ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

2 hours ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

2 hours ago