ಹೊಸದಿಲ್ಲಿ: ಮೇಧಾವಿ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ.
ದೇಶಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.
ಮೇಧಾವಿ ಅರ್ಥಶಾಸ್ತ್ರಜ್ಞ, ಡಾ.ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಯಾವಾಗಲೂ ಸ್ಮರಿಸಲಾಗುತ್ತದೆ ಮತ್ತು ಗೌರವಿಸಲಾಗುತ್ತದೆ. ಅಗಲಿದ ಆತ್ಮಕ್ಕೆ ಸದ್ಗತಿ ದೊರೆಯಲೆಂದು ನಾವು ಭಗವಂತನನ್ನು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ್ ಸಿಂಗ್(92)ಅವರು ದೆಹಲಿ ಏಮ್ಸ್ನಲ್ಲಿ ಗುರುವಾರ ನಿಧನರಾಗಿದ್ದಾರೆ.





