ದೇಶ- ವಿದೇಶ

ಮಾರುಕಟ್ಟೆ ಪತನ ; ಕರಗಿದ 20 ಲಕ್ಷ ಕೋಟಿ

ಮುಂಬೈ : ಸೋಮವಾರ (ಏ.7) ಬೆಳಿಗ್ಗೆ ಷೇರು ಮಾರುಕಟ್ಟೆ ಅಕ್ಷರಶಃ ರಕ್ತಪಾತ ಕಂಡಿದೆ. ಕೆಲವೇ 20 ನಿಮಿಷಗಳಲ್ಲಿ ಭಾರತೀಯ ಹೂಡಿಕೆದಾರರು ಸುಮಾರ 20.16 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭಿಸಿದ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ ಇಂತಹ ನಷ್ಟ ಕಂಡು ಬಂದಿದೆ.

ಏಷ್ಯಾದ ಷೇರುಪೇಟೆಗಳು ಮತ್ತು ಅಮೆರಿಕದ ಷೇರುಪೇಟೆಗಳಲ್ಲಿ ಮಾರಾಟ ಕುಸಿತವು ಗಮನಾರ್ಹ ನಷ್ಟವನ್ನು ಸೂಚಿಸಿದ್ದು, ಸೆನ್ಸೆಕ್ಸ್ 4,000 ಅಂಕ ಕುಸಿತ ದಾಖಲಿಸಿದೆ. ಭಾರತೀಯ ಈಕ್ವಿಟಿ ಮಾರುಕಟ್ಟೆ 10 ತಿಂಗಳಲ್ಲೇ ಅತ್ಯಧಿಕ ಕುಸಿತ ಕಾಣುವಂತೆ ಮಾಡಿದೆ. ಇದರ ಜೊತೆಗೆ ಹೂಡಿಕೆದಾರರ 20 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ.

ಜಾಗತಿಕ ಆರ್ಥಿಕ ಹಿಂಜರಿತದ ಭಯ ಮತ್ತು ವ್ಯಾಪಾರ ಯುದ್ಧದ ಹೆಚ್ಚುತ್ತಿರುವ ಪರಿಣಾಮದಿಂದಾಗಿ, ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಷೇರುಗಳನ್ನು ಮಾರಾಟ ಮಾಡಿದ್ದು, ಇದರ ಪರಿಣಾಮ ಎಂಎಸ್ಸಿಐ ಏಷ್ಯಾ ಪೆಸಿಫಿಕ್ ಸೂಚ್ಯಂಕವು ಶೇ. 7.9 ರಷ್ಟು ಕುಸಿದಿದೆ. ಇದು ಅಕ್ಟೋಬರ್ 2008 ರ ನಂತರದ ಅತಿದೊಡ್ಡ ಕುಸಿತವಾಗಿದೆ. ಟಿಎಸ್‍ಎಂಸಿ, ಟೆನ್ಸೆಂಟ್ ಮತ್ತು ಸೋನಿಯಂತಹ ದೊಡ್ಡ ಕಂಪನಿಗಳ ಷೇರುಗಳು ಹೆಚ್ಚಿನ ನಷ್ಟವನ್ನು ಅನುಭವಿಸಿವೆ. ಭಾರತದಲ್ಲಿ, ಬಿಎಸ್‍ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 3000 ಪಾಯಿಂಟ್ ಗಳ ಕುಸಿತ ಕಂಡಿತು. ನಿಫ್ಟಿ50 ಕೂಡ 919 ಪಾಯಿಂಟ್ ಗಳಷ್ಟು ಕುಸಿದಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ ಭಾರೀ ಇಳಿಕೆ ಕಂಡಿದೆ. ಸೆನ್ಸೆಕ್ಸ್ ಆರಂಭದಲ್ಲಿ 4 ಸಾವಿರ ಅಂಕ ಪತನಗೊಂಡು ನಂತರ ಚೇತರಿಕೆ ಕಂಡಿತ್ತು. ಬೆಳಗ್ಗೆ 11 ಗಂಟೆಯ ವೇಳೆಗೆ 2,900 ಅಂಕ ಚೇತರಿಕೆಯಾಗಿ 72,423.48 ರಲ್ಲಿ ವ್ಯವಹಾರ ನಡೆಸುತ್ತಿತ್ತು. ನಿಫ್ಟಿ 900 ಅಂಕ ಇಳಿಕೆಯಾಗಿ 21,960.80 ರಲ್ಲಿ ವ್ಯವಹಾರ ನಡೆಸುತ್ತಿದೆ. ರಿಯಾಲ್ಟಿ, ಐಟಿ, ಆಟೋ ಮತ್ತು ಲೋಹ ಮುಂತಾದ ಕ್ಷೇತ್ರಗಳ ಷೇರುಗಳು ಮೌಲ್ಯ ಇಳಿಕೆಯಾಗಿದೆ. ಸೆನ್ಸೆಕ್ಸ್ ಸುಮಾರು 4,000 ಪಾಯಿಂಟ್ಗಳ ಕುಸಿತವನ್ನು ಕಂಡಿದ್ದು, ಕಳೆದ ವಹಿವಾಟಿನ ಅವಧಿಯಿಂದ 3.5% ಕ್ಕಿಂತ ಹೆಚ್ಚು ಕುಸಿತ ಕಂಡಿದೆ, ಆದರೆ ನಿಫ್ಟಿ ಬೆಳಿಗ್ಗೆ 1,000 ಪಾಯಿಂಟ್ಗಳಿಗೂ ಹೆಚ್ಚು ಕುಸಿತ ಕಂಡಿದೆ.

ಸೋಮವಾರ ಬೆಳಿಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏಷ್ಯಾದ ಎಲ್ಲ ಮಾರುಕಟ್ಟೆಗಳಲ್ಲಿ ಭಾರೀ ಇಳಿಕೆಯಾಗಿತ್ತು. ಗಿಫ್ಟ್ ನಿಫ್ಟಿಯೂ ಅಂಕ ಇಳಿಕೆಯಾಗುತ್ತಿದ್ದಂತೆ ಭಾರತದಲ್ಲೂ ಪರಿಣಾಮ ಬೀಳುವುದು ಖಚಿತವಾಗಿತ್ತು. ಬೆಳಗ್ಗೆಯವರೆಗೆ 19 ಲಕ್ಷ ಕೋಟಿ ನಷ್ಟ ಸಂಭವಿಸಿದ್ದು ನಿಫ್ಟಿ ಮತ್ತು ಸೆನ್ಸೆಕ್ಸ್ ಮತ್ತಷ್ಟು ಕುಸಿದರೆ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ.ಗಿಫ್ಟಿ ನಿಫ್ಟಿ 888, ಜಪಾನ್‍ನ ನಿಕ್ಕಿ 225 2,302 ಅಂಕ, ತೈವಾನ್‍ನ ವೈಯ್ಟೆಡ್ ಸೂಚ್ಯಂಕವೂ 2063 ಅಂಶ ಕುಸಿಯಿತು. ಹಾಂಕಾಂಗ್‍ನ ಹ್ಯಾಂಗ್‍ಸೆನ್ 2,677 ಅಂಕ ಕುಸಿದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

6 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

11 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago