ದೇಶ- ವಿದೇಶ

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ ಮಂದಾನ ಮೌನಮುರಿದಿದ್ದು, ತಮ್ಮ ಮದುವೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಮೃತಿ ಮಂದಾನ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಪಲಾಶ್‌ ಮುಚ್ಚಲ್‌ ಜೊತೆಗಿನ ಮದುವೆ ರದ್ದಾಗಿದೆ. ಎರಡೂ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಬೇಕು. ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುವಂತೆ ಸ್ಮೃತಿ ಮಂದಾನ ಮನವಿ ಮಾಡಿದ್ದಾರೆ.

ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತಲೇ ಭಾವಿಸುತ್ತೇನೆ. ನಾನು ತುಂಬಾ ಖಾಸಗಿ ವ್ಯಕ್ತಿ. ಅದನ್ನು ಹಾಗೇ ಇಡಲು ಬಯಸುತ್ತೇನೆ. ಮದುವೆಯನ್ನು ರದ್ದುಗೊಳಿಸಲಾಗಿದೆ. ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ಬಯಸುತ್ತೇನೆ. ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ, ನಮ್ಮದೆ ಹಾದಿಯಲ್ಲಿ ಮುಂದುವರಿಸಲು ನಮಗೆ ಅವಕಾಶ ಕೊಡಿ ಎಂದು ವಿನಂತಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

11 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

11 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

14 hours ago