ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ ಮಂದಾನ ಮೌನಮುರಿದಿದ್ದು, ತಮ್ಮ ಮದುವೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಮೃತಿ ಮಂದಾನ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ. ಎರಡೂ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಬೇಕು. ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುವಂತೆ ಸ್ಮೃತಿ ಮಂದಾನ ಮನವಿ ಮಾಡಿದ್ದಾರೆ.
ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತಲೇ ಭಾವಿಸುತ್ತೇನೆ. ನಾನು ತುಂಬಾ ಖಾಸಗಿ ವ್ಯಕ್ತಿ. ಅದನ್ನು ಹಾಗೇ ಇಡಲು ಬಯಸುತ್ತೇನೆ. ಮದುವೆಯನ್ನು ರದ್ದುಗೊಳಿಸಲಾಗಿದೆ. ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ಬಯಸುತ್ತೇನೆ. ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ, ನಮ್ಮದೆ ಹಾದಿಯಲ್ಲಿ ಮುಂದುವರಿಸಲು ನಮಗೆ ಅವಕಾಶ ಕೊಡಿ ಎಂದು ವಿನಂತಿಸಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…