ದೇಶ- ವಿದೇಶ

62ನೇ ವಯಸ್ಸಲ್ಲಿ ಮದುವೆ : ಅಧಿಕಾರದಲ್ಲಿರುವಾಗಲೇ ಮದುವೆಯಾಗಿ ದಾಖಲೆ ಬರೆದ ಆಸಿಸ್‌ ಪ್ರಧಾನಿ

ಹೊಸದಿಲ್ಲಿ : ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇಂದು ಕ್ಯಾನ್‌ಬೆರಾದ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಪ್ರೇಯಸಿ ಜೋಡಿ ಹೇಡನ್ ಅವರನ್ನು ವಿವಾಹವಾಗಿದ್ದಾರೆ.

124 ವರ್ಷಗಳ ಆಸ್ಟ್ರೇಲಿಯಾದ ಫೆಡರಲ್ ಸರ್ಕಾರದ ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗ ಮದುವೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಆಲ್ಬನೀಸ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ:-ಕ್ಯಾಬ್ ದರೋಡೆ : ಮೈಸೂರಿನ 6 ಮಂದಿ ಸೇರಿ 8 ಮಂದಿ ಬಂಧನ

62 ವರ್ಷದ ಪ್ರಧಾನಿ ಆಲ್ಬನೀಸ್ ಅವರು ತಮ್ಮ ಧೀರ್ಘಕಾಲದ ಗೆಳತಿ ಜೊಡಿ ಹೇಡನ್‌ ಅವರನ್ನು ಇಂದು ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದರು. ಆಲ್ಬನೀಸ್‌ ಅವರಿಗೆ ಇದು ಎರಡನೇ ಮದುವೆ. ಈ ಮದುವೆಯಲ್ಲಿ ಸುಮಾರು 60 ಅತಿಥಿಗಳು ಮಾತ್ರ ಈ ಸಮಾರಂಭದಲ್ಲಿ ಹಾಜರಿದ್ದರು. ಇದರಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ನಟ ರಸೆಲ್ ಕ್ರೋವ್ ಮತ್ತು ಹಲವಾರು ಕ್ಯಾಬಿನೆಟ್ ಮಂತ್ರಿಗಳು ಕೂಡ ಸೇರಿದ್ದಾರೆ. ಈ ಸಮಾರಂಭವು ಖಾಸಗಿಯಾಗಿದ್ದರಿಂದ ಯಾವುದೇ ಮಾಧ್ಯಮಗಳಿಗೂ ಒಳಗೆ ಪ್ರವೇಶಿಸಲು ಅನುಮತಿ ಇರಲಿಲ್ಲ.

ನಮ್ಮ ಕುಟುಂಬ ಮತ್ತು ಹತ್ತಿರದ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಮುಂದಿನ ಜೀವನವನ್ನು ಒಟ್ಟಿಗೆ ಕಳೆಯಲು ನಮ್ಮ ಪ್ರೀತಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳಲು ವಿವಾಹವಾಗಿದ್ದೇವೆ. ಈ ಮಾಹಿತಿಯನ್ನು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ ಎಂದು ಆಸ್ಟ್ರೇಲಿಯನ್ ಪ್ರಧಾನಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

1 hour ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

2 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

2 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

3 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

6 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

7 hours ago