ದೇಶ- ವಿದೇಶ

62ನೇ ವಯಸ್ಸಲ್ಲಿ ಮದುವೆ : ಅಧಿಕಾರದಲ್ಲಿರುವಾಗಲೇ ಮದುವೆಯಾಗಿ ದಾಖಲೆ ಬರೆದ ಆಸಿಸ್‌ ಪ್ರಧಾನಿ

ಹೊಸದಿಲ್ಲಿ : ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇಂದು ಕ್ಯಾನ್‌ಬೆರಾದ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಪ್ರೇಯಸಿ ಜೋಡಿ ಹೇಡನ್ ಅವರನ್ನು ವಿವಾಹವಾಗಿದ್ದಾರೆ.

124 ವರ್ಷಗಳ ಆಸ್ಟ್ರೇಲಿಯಾದ ಫೆಡರಲ್ ಸರ್ಕಾರದ ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗ ಮದುವೆಯಾದ ಮೊದಲ ಆಸ್ಟ್ರೇಲಿಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಆಲ್ಬನೀಸ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ:-ಕ್ಯಾಬ್ ದರೋಡೆ : ಮೈಸೂರಿನ 6 ಮಂದಿ ಸೇರಿ 8 ಮಂದಿ ಬಂಧನ

62 ವರ್ಷದ ಪ್ರಧಾನಿ ಆಲ್ಬನೀಸ್ ಅವರು ತಮ್ಮ ಧೀರ್ಘಕಾಲದ ಗೆಳತಿ ಜೊಡಿ ಹೇಡನ್‌ ಅವರನ್ನು ಇಂದು ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದರು. ಆಲ್ಬನೀಸ್‌ ಅವರಿಗೆ ಇದು ಎರಡನೇ ಮದುವೆ. ಈ ಮದುವೆಯಲ್ಲಿ ಸುಮಾರು 60 ಅತಿಥಿಗಳು ಮಾತ್ರ ಈ ಸಮಾರಂಭದಲ್ಲಿ ಹಾಜರಿದ್ದರು. ಇದರಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ನಟ ರಸೆಲ್ ಕ್ರೋವ್ ಮತ್ತು ಹಲವಾರು ಕ್ಯಾಬಿನೆಟ್ ಮಂತ್ರಿಗಳು ಕೂಡ ಸೇರಿದ್ದಾರೆ. ಈ ಸಮಾರಂಭವು ಖಾಸಗಿಯಾಗಿದ್ದರಿಂದ ಯಾವುದೇ ಮಾಧ್ಯಮಗಳಿಗೂ ಒಳಗೆ ಪ್ರವೇಶಿಸಲು ಅನುಮತಿ ಇರಲಿಲ್ಲ.

ನಮ್ಮ ಕುಟುಂಬ ಮತ್ತು ಹತ್ತಿರದ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಮುಂದಿನ ಜೀವನವನ್ನು ಒಟ್ಟಿಗೆ ಕಳೆಯಲು ನಮ್ಮ ಪ್ರೀತಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳಲು ವಿವಾಹವಾಗಿದ್ದೇವೆ. ಈ ಮಾಹಿತಿಯನ್ನು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ ಎಂದು ಆಸ್ಟ್ರೇಲಿಯನ್ ಪ್ರಧಾನಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago