ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ.
ಬಹಾವಲ್ಪುರದಲ್ಲಿ ಕದ್ದುಮುಚ್ಚಿ ಅಂತ್ಯಕ್ರಿಯೆ ನಡೆಸಲಾಗಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯು ತಾಹಿರ್ ಅನ್ವರ್ ಅವರ ಸಾವಿನ ಕುರಿತು ಅಧಿಕೃತ ಮಾಹಿತಿ ನೀಡದೆ ಮೌನ ವಹಿಸಿದೆ. ಸಾವಿನ ನಿಜವಾದ ಕಾರಣ ಇನ್ನೂ ನಿಗೂಢವಾಗಿದೆ. ವೈದ್ಯರಿಂದಲೂ ಸ್ಪಷ್ಟನೆ ಸಿಗದಿರುವುದು ಊಹಾಪೋಹಗಳನ್ನು ಹೆಚ್ಚಿಸಿದೆ.
ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬದ ಹಲವು ಸದಸ್ಯರು ಸಾವನ್ನಪ್ಪಿದ್ದರು. ಆಗ ಬಚಾವಾಗಿದ್ದ ತಾಹಿರ್ ಅನ್ವರ್ ಈಗ ಅನುಮಾನಾಸ್ಪದ ಸಾವನ್ನಪ್ಪಿರುವುದು ಗಮನಾರ್ಹವಾಗಿದೆ. ಪಾಕಿಸ್ತಾನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಹಲವು ವ್ಯಕ್ತಿಗಳು ನಿಗೂಢ ಸಾವನ್ನಪ್ಪುತ್ತಿದ್ದಾರೆ. ತಾಹಿರ್ ಅನ್ವರ್ ಅವರ ಸಾವೂ ಈ ಸರಣಿಯ ಭಾಗವಾಗಿರುವ ಸಾಧ್ಯತೆ ಇದೆ ಎಂದು ಬೇಹುಗಾರಿಕಾ ಮೂಲಗಳು ಸೂಚಿಸುತ್ತಿವೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…