ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ.
ಬಹಾವಲ್ಪುರದಲ್ಲಿ ಕದ್ದುಮುಚ್ಚಿ ಅಂತ್ಯಕ್ರಿಯೆ ನಡೆಸಲಾಗಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯು ತಾಹಿರ್ ಅನ್ವರ್ ಅವರ ಸಾವಿನ ಕುರಿತು ಅಧಿಕೃತ ಮಾಹಿತಿ ನೀಡದೆ ಮೌನ ವಹಿಸಿದೆ. ಸಾವಿನ ನಿಜವಾದ ಕಾರಣ ಇನ್ನೂ ನಿಗೂಢವಾಗಿದೆ. ವೈದ್ಯರಿಂದಲೂ ಸ್ಪಷ್ಟನೆ ಸಿಗದಿರುವುದು ಊಹಾಪೋಹಗಳನ್ನು ಹೆಚ್ಚಿಸಿದೆ.
ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬದ ಹಲವು ಸದಸ್ಯರು ಸಾವನ್ನಪ್ಪಿದ್ದರು. ಆಗ ಬಚಾವಾಗಿದ್ದ ತಾಹಿರ್ ಅನ್ವರ್ ಈಗ ಅನುಮಾನಾಸ್ಪದ ಸಾವನ್ನಪ್ಪಿರುವುದು ಗಮನಾರ್ಹವಾಗಿದೆ. ಪಾಕಿಸ್ತಾನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಹಲವು ವ್ಯಕ್ತಿಗಳು ನಿಗೂಢ ಸಾವನ್ನಪ್ಪುತ್ತಿದ್ದಾರೆ. ತಾಹಿರ್ ಅನ್ವರ್ ಅವರ ಸಾವೂ ಈ ಸರಣಿಯ ಭಾಗವಾಗಿರುವ ಸಾಧ್ಯತೆ ಇದೆ ಎಂದು ಬೇಹುಗಾರಿಕಾ ಮೂಲಗಳು ಸೂಚಿಸುತ್ತಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…