ದೇಶ- ವಿದೇಶ

ಭಾರತ ನಡೆಸಿದ ದಾಳಿಯಲ್ಲಿ ಮಸೂದ್‌ ಅಜರ್‌ ಕುಟುಂಬ ಛಿದ್ರ : ಉಗ್ರ ಇಲ್ಯಾಸ್‌ ಕಾಶ್ಮೀರಿ

ಹೊಸದಿಲ್ಲಿ : ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾರೆ.

ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಸೇನಾ ಸಿಬ್ಬಂದಿಯಿಂದ ಸುತ್ತುವರೆದಿರುವ ಮಸೂದ್ ಇಲ್ಯಾಸ್ ಕಾಶ್ಮೀರಿ ವೀರಾವೇಶದಿಂದ ಭಾರತದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಮೇ 7ರಂದು ನಡೆದ ಆಪರೇಷನ್ ಸಿಂಧೂರ್ ದಾಳಿಯ ಸಮಯದಲ್ಲಿ ಅಜರ್ ಅವರ ಕುಟುಂಬವನ್ನು “ತುಂಡುಗಳಾಗಿ ಪೀಸ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆ ಮೊದಲ ಬಾರಿಗೆ ತನ್ನ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಸದಸ್ಯರು ಭಾರತದ ಆಪರೇಷನ್ ಸಿಂಧೂರ್‌ನ ಭಾಗವಾಗಿ ಬಹವಾಲ್ಪುರದಲ್ಲಿ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಒಪ್ಪಿಕೊಂಡಿದೆ. ಎಲ್ಲವನ್ನೂ ತ್ಯಾಗ ಮಾಡಿದ ನಂತರ ಮೇ 7ರಂದು ಬಹಾವಲ್ಪುರದಲ್ಲಿ ಭಾರತೀಯ ಪಡೆಗಳು ಮೌಲಾನಾ ಮಸೂದ್ ಅಜರ್ ಅವರ ಕುಟುಂಬವನ್ನು ಛಿದ್ರಗೊಳಿಸಿದವು ಎಂದು ಕಾಶ್ಮೀರಿ ಹೇಳಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇದರಲ್ಲಿ 25 ಪ್ರವಾಸಿಗರು ಸಾವನ್ನಪ್ಪಿದರು, ಓರ್ವ ಸ್ಥಳೀಯ ಕೂಡ ಸಾವನ್ನಪ್ಪಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಾದ್ಯಂತ 9 ಭಯೋತ್ಪಾದಕ ಶಿಬಿರಗಳ ಮೇಲೆ ಸಂಘಟಿತ ದಾಳಿಗಳನ್ನು ನಡೆಸಿತು. ಲಾಹೋರ್‌ನಿಂದ 400 ಕಿ.ಮೀ ದೂರದಲ್ಲಿರುವ ಪಾಕಿಸ್ತಾನದ 12ನೇ ಅತಿದೊಡ್ಡ ನಗರವಾದ ಬಹಾವಲ್ಪುರದ ಮೇಲಿನ ದಾಳಿಯಲ್ಲಿ ಅಜರ್‌ನ 10 ಸಂಬಂಧಿಕರನ್ನು ಕೂಡ ಕೊಲ್ಲಲಾಯಿತು. ಇದರಲ್ಲಿ ಅವನ ಸಹೋದರಿ, ಆಕೆಯ ಪತಿ, ಅವನ ಸೋದರಳಿಯ, ಅವನ ಸೊಸೆ ಮತ್ತು ಇತರೆ ಕುಟುಂಬಸ್ಥರು ಕೂಡ ಸೇರಿದ್ದಾರೆ. ಬೆಳಗಿನ ಜಾವದ ದಾಳಿಯಲ್ಲಿ ಅಜರ್‌ನ ನಾಲ್ವರು ಸಹಾಯಕರು ಸಹ ಸಾವನ್ನಪ್ಪಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago