ದೇಶ- ವಿದೇಶ

ಭಾರತ ನಡೆಸಿದ ದಾಳಿಯಲ್ಲಿ ಮಸೂದ್‌ ಅಜರ್‌ ಕುಟುಂಬ ಛಿದ್ರ : ಉಗ್ರ ಇಲ್ಯಾಸ್‌ ಕಾಶ್ಮೀರಿ

ಹೊಸದಿಲ್ಲಿ : ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾರೆ.

ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಸೇನಾ ಸಿಬ್ಬಂದಿಯಿಂದ ಸುತ್ತುವರೆದಿರುವ ಮಸೂದ್ ಇಲ್ಯಾಸ್ ಕಾಶ್ಮೀರಿ ವೀರಾವೇಶದಿಂದ ಭಾರತದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಮೇ 7ರಂದು ನಡೆದ ಆಪರೇಷನ್ ಸಿಂಧೂರ್ ದಾಳಿಯ ಸಮಯದಲ್ಲಿ ಅಜರ್ ಅವರ ಕುಟುಂಬವನ್ನು “ತುಂಡುಗಳಾಗಿ ಪೀಸ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆ ಮೊದಲ ಬಾರಿಗೆ ತನ್ನ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಸದಸ್ಯರು ಭಾರತದ ಆಪರೇಷನ್ ಸಿಂಧೂರ್‌ನ ಭಾಗವಾಗಿ ಬಹವಾಲ್ಪುರದಲ್ಲಿ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಒಪ್ಪಿಕೊಂಡಿದೆ. ಎಲ್ಲವನ್ನೂ ತ್ಯಾಗ ಮಾಡಿದ ನಂತರ ಮೇ 7ರಂದು ಬಹಾವಲ್ಪುರದಲ್ಲಿ ಭಾರತೀಯ ಪಡೆಗಳು ಮೌಲಾನಾ ಮಸೂದ್ ಅಜರ್ ಅವರ ಕುಟುಂಬವನ್ನು ಛಿದ್ರಗೊಳಿಸಿದವು ಎಂದು ಕಾಶ್ಮೀರಿ ಹೇಳಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇದರಲ್ಲಿ 25 ಪ್ರವಾಸಿಗರು ಸಾವನ್ನಪ್ಪಿದರು, ಓರ್ವ ಸ್ಥಳೀಯ ಕೂಡ ಸಾವನ್ನಪ್ಪಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಾದ್ಯಂತ 9 ಭಯೋತ್ಪಾದಕ ಶಿಬಿರಗಳ ಮೇಲೆ ಸಂಘಟಿತ ದಾಳಿಗಳನ್ನು ನಡೆಸಿತು. ಲಾಹೋರ್‌ನಿಂದ 400 ಕಿ.ಮೀ ದೂರದಲ್ಲಿರುವ ಪಾಕಿಸ್ತಾನದ 12ನೇ ಅತಿದೊಡ್ಡ ನಗರವಾದ ಬಹಾವಲ್ಪುರದ ಮೇಲಿನ ದಾಳಿಯಲ್ಲಿ ಅಜರ್‌ನ 10 ಸಂಬಂಧಿಕರನ್ನು ಕೂಡ ಕೊಲ್ಲಲಾಯಿತು. ಇದರಲ್ಲಿ ಅವನ ಸಹೋದರಿ, ಆಕೆಯ ಪತಿ, ಅವನ ಸೋದರಳಿಯ, ಅವನ ಸೊಸೆ ಮತ್ತು ಇತರೆ ಕುಟುಂಬಸ್ಥರು ಕೂಡ ಸೇರಿದ್ದಾರೆ. ಬೆಳಗಿನ ಜಾವದ ದಾಳಿಯಲ್ಲಿ ಅಜರ್‌ನ ನಾಲ್ವರು ಸಹಾಯಕರು ಸಹ ಸಾವನ್ನಪ್ಪಿದ್ದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

1 hour ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

2 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

2 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

3 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

19 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

21 hours ago