ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು ಗೌತಮ್ ಬುದ್ಧ ನಗರ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ ಜಂಟಿಯಾಗಿ ಬಂಧಿಸಿವೆ. ಆದಿತ್ಯ ಆನಂದ್ ಎಂದು ಗುರುತಿಸಲಾದ ಆರೋಪಿಯನ್ನು ತಮಿಳುನಾಡಿನ ತಿರುಚಿನಾಪಳ್ಳಿ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಆನಂದ್ ಜಿಲ್ಲೆಯಲ್ಲಿ ಕಾರ್ಮಿಕ ಧರಣಿ ಮತ್ತು ಪ್ರದರ್ಶನಗಳ ಸಮಯದಲ್ಲಿ ಪ್ರಚೋದನಕಾರಿ ಚಟುವಟಿಕೆಗಳನ್ನು ಆಯೋಜಿಸಿ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.





