ದೇಶ- ವಿದೇಶ

ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಮುಖಭಂಗ: ಪಕ್ಷದ ಘಟಕ ವಿಸರ್ಜಿಸಿದ ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ(ಪಿಡಿಪಿ)ಯ ಅಧ್ಯಕ್ಷೆ ಮೆಹಬೂಬ ಮುಫ್ತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ಶನಿವಾರ ವಿಸರ್ಜಿಸಿದ್ದಾರೆ.

ಮುಂದಿನ ದಿನಗಳಲ್ಲಿ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಘಟಕದ ವಿಭಾಗಗಳನ್ನು ರಚಿಸಲಾಗುವುದು ಎಂದು ಪಿಡಿಪಿ ಪಕ್ಷ ತಿಳಿಸಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಕೇವಲ ಮೂರು ಸ್ಥಾನಗೆದ್ದು ಭಾರಿ ಮುಖಭಂಗ ಅನುಭವಿಸಿದ ಬಳಿಕ, ಪಕ್ಷದ ಪರಾಮರ್ಶೆ ಸಭೆಯ ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಫ್ತಿ ಅವರಿಗೆ ಈ ಫಲಿತಾಂಶ ಮುಜುಗರವನ್ನುಂಟು ಮಾಡಿದೆ. ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗೆದ್ದಿದ್ದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ನಾಯಕ ಒಮರ್‌ ಅಬ್ದುಲ್ಲಾ ಅವರು ಇಂಡಿಯಾ ಮೈತ್ರಿಕೂಟದ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

1 hour ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

1 hour ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

2 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

2 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

2 hours ago