ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಯ ಅಧ್ಯಕ್ಷೆ ಮೆಹಬೂಬ ಮುಫ್ತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ಶನಿವಾರ ವಿಸರ್ಜಿಸಿದ್ದಾರೆ.
ಮುಂದಿನ ದಿನಗಳಲ್ಲಿ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಘಟಕದ ವಿಭಾಗಗಳನ್ನು ರಚಿಸಲಾಗುವುದು ಎಂದು ಪಿಡಿಪಿ ಪಕ್ಷ ತಿಳಿಸಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಕೇವಲ ಮೂರು ಸ್ಥಾನಗೆದ್ದು ಭಾರಿ ಮುಖಭಂಗ ಅನುಭವಿಸಿದ ಬಳಿಕ, ಪಕ್ಷದ ಪರಾಮರ್ಶೆ ಸಭೆಯ ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಫ್ತಿ ಅವರಿಗೆ ಈ ಫಲಿತಾಂಶ ಮುಜುಗರವನ್ನುಂಟು ಮಾಡಿದೆ. ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗೆದ್ದಿದ್ದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರು ಇಂಡಿಯಾ ಮೈತ್ರಿಕೂಟದ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…