ದೇಶ- ವಿದೇಶ

ಮೆಹುಲ್‌ ಚೋಕ್ಸಿ ಹಸ್ತಾಂತರ : ಗೃಹ ಸಚಿವಾಲಯ ಪತ್ರ

ಹೊಸದಿಲ್ಲಿ : ಭಾರತದಲ್ಲಿ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ಬೆಲ್ಜಿಯಂನಲ್ಲಿ ಬಂಧನಕ್ಕೊಳಪಟ್ಟಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ದೇಶಕ್ಕೆ ಹಸ್ತಾಂತರ ಮಾಡಿದರೆ ಕಾನೂನು ರೀತಿ ನಡೆಸಿಕೊಳ್ಳುತ್ತೇವೆ ಎಂದು ಗೃಹಸಚಿವಾಲಯ ಪತ್ರ ಬರೆದಿದೆ.

ಬೆಲ್ಜಿಯಂನ ನ್ಯಾಯಾಂಗ ಅಧಿಕಾರಿಗಳಿಗೆ ಮತ್ತು ಸಚಿವಾಲಯಕ್ಕೆ ಕೇಂದ್ರ ಗೃಹಕಲ್ಯಾಣ ಇಲಾಖೆ ಪತ್ರ ಬರೆದಿದ್ದು, ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕೆಂದು ಔಪಚಾರಿಕವಾಗಿ ಮನವಿ ಮಾಡಿತ್ತು.

ನಿಮ್ಮ ದೇಶಕ್ಕೆ ಹಸ್ತಾಂತರ ಮಾಡಿದರೆ ಅವರನ್ನು ಕಾನೂನುಬದ್ಧವಾಗಿ ನಡೆಸಿಕೊಳ್ಳುತ್ತೀರಾ? ಎಂಬ ಪತ್ರಕ್ಕೆ ಉತ್ತರಿಸಿರುವ ಗೃಹ ಇಲಾಖೆ, ಆರೋಪಿಯನ್ನು ದೇಶದ ಕಾನೂನಿನ ಪ್ರಕಾರವೇ ನಡೆಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದೆ.

ಒಂದು ವೇಳೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಿದರೆ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಜೈಲಿನ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದೇವೆ. ವೈದ್ಯಕೀಯ ಚಿಕಿತ್ಸೆ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸುವ ಆಶ್ವಾಸನೆ ಕೊಡಲಾಗಿದೆ. ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಮನವಿ ಮಾಡಿಕೊಂಡಿದೆ.

ಐಪಿಸಿ ಸೆಕ್ಷನ್ ೧೨೦ ಬಿ, ೪೦೯, ೪೨೦, ೪೭೭ ಎ, ೨೦೧ ಹಾಗೂ ಭ್ರಷ್ಟಾಚಾರ ತಡೆಕಾಯ್ದೆ ೧೯೯೮ ಅಡಿ ವಿವಿಧ ದೂರುಗಳನ್ನು ಸಿಬಿಐ ದಾಖಲಿಸಿದೆ. ಪತ್ರದಲ್ಲಿ ಮೆಹುಲ್ ಚೋಕ್ಸಿಗೆ ನಿರ್ದಿಷ್ಟ ಸೌಲಭ್ಯ, ವಸತಿ ವ್ಯವಸ್ಥೆ, ವೈದ್ಯಕೀಯ ವೆಚ್ಚ, ಮೇಲ್ವಿಚಾರಣೆ ಕಾರ್ಯ ವಿಧಾನಗಳು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈ ಆರೋಪಿಯನ್ನು ತಕ್ಷಣವೇ ಹಸ್ತಾಂತರಿಸಬೇಕು.

ಆರೋಪಿಯನ್ನು ಮುಂಬೈನ ಅರ್ತೂರು ರಸ್ತೆಯಲ್ಲಿರುವ ಜೈಲಿನಲ್ಲಿ ಇಡಲಾಗುವುದು. ಆದಷ್ಟು ಶೀಘ್ರ ಹಸ್ತಾಂತರ ಮಾಡುವಂತೆ ಸಿಬಿಐ ಕೋರಿದೆ.

ಆಂದೋಲನ ಡೆಸ್ಕ್

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

27 mins ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

32 mins ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

1 hour ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

1 hour ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

1 hour ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 hours ago