ದೇಶ- ವಿದೇಶ

ಮೆಹುಲ್‌ ಚೋಕ್ಸಿ ಹಸ್ತಾಂತರ : ಗೃಹ ಸಚಿವಾಲಯ ಪತ್ರ

ಹೊಸದಿಲ್ಲಿ : ಭಾರತದಲ್ಲಿ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ಬೆಲ್ಜಿಯಂನಲ್ಲಿ ಬಂಧನಕ್ಕೊಳಪಟ್ಟಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ದೇಶಕ್ಕೆ ಹಸ್ತಾಂತರ ಮಾಡಿದರೆ ಕಾನೂನು ರೀತಿ ನಡೆಸಿಕೊಳ್ಳುತ್ತೇವೆ ಎಂದು ಗೃಹಸಚಿವಾಲಯ ಪತ್ರ ಬರೆದಿದೆ.

ಬೆಲ್ಜಿಯಂನ ನ್ಯಾಯಾಂಗ ಅಧಿಕಾರಿಗಳಿಗೆ ಮತ್ತು ಸಚಿವಾಲಯಕ್ಕೆ ಕೇಂದ್ರ ಗೃಹಕಲ್ಯಾಣ ಇಲಾಖೆ ಪತ್ರ ಬರೆದಿದ್ದು, ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕೆಂದು ಔಪಚಾರಿಕವಾಗಿ ಮನವಿ ಮಾಡಿತ್ತು.

ನಿಮ್ಮ ದೇಶಕ್ಕೆ ಹಸ್ತಾಂತರ ಮಾಡಿದರೆ ಅವರನ್ನು ಕಾನೂನುಬದ್ಧವಾಗಿ ನಡೆಸಿಕೊಳ್ಳುತ್ತೀರಾ? ಎಂಬ ಪತ್ರಕ್ಕೆ ಉತ್ತರಿಸಿರುವ ಗೃಹ ಇಲಾಖೆ, ಆರೋಪಿಯನ್ನು ದೇಶದ ಕಾನೂನಿನ ಪ್ರಕಾರವೇ ನಡೆಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದೆ.

ಒಂದು ವೇಳೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಿದರೆ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಜೈಲಿನ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದೇವೆ. ವೈದ್ಯಕೀಯ ಚಿಕಿತ್ಸೆ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸುವ ಆಶ್ವಾಸನೆ ಕೊಡಲಾಗಿದೆ. ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಮನವಿ ಮಾಡಿಕೊಂಡಿದೆ.

ಐಪಿಸಿ ಸೆಕ್ಷನ್ ೧೨೦ ಬಿ, ೪೦೯, ೪೨೦, ೪೭೭ ಎ, ೨೦೧ ಹಾಗೂ ಭ್ರಷ್ಟಾಚಾರ ತಡೆಕಾಯ್ದೆ ೧೯೯೮ ಅಡಿ ವಿವಿಧ ದೂರುಗಳನ್ನು ಸಿಬಿಐ ದಾಖಲಿಸಿದೆ. ಪತ್ರದಲ್ಲಿ ಮೆಹುಲ್ ಚೋಕ್ಸಿಗೆ ನಿರ್ದಿಷ್ಟ ಸೌಲಭ್ಯ, ವಸತಿ ವ್ಯವಸ್ಥೆ, ವೈದ್ಯಕೀಯ ವೆಚ್ಚ, ಮೇಲ್ವಿಚಾರಣೆ ಕಾರ್ಯ ವಿಧಾನಗಳು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈ ಆರೋಪಿಯನ್ನು ತಕ್ಷಣವೇ ಹಸ್ತಾಂತರಿಸಬೇಕು.

ಆರೋಪಿಯನ್ನು ಮುಂಬೈನ ಅರ್ತೂರು ರಸ್ತೆಯಲ್ಲಿರುವ ಜೈಲಿನಲ್ಲಿ ಇಡಲಾಗುವುದು. ಆದಷ್ಟು ಶೀಘ್ರ ಹಸ್ತಾಂತರ ಮಾಡುವಂತೆ ಸಿಬಿಐ ಕೋರಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago