ದೇಶ- ವಿದೇಶ

ಮೆಹುಲ್‌ ಚೋಕ್ಸಿ ಹಸ್ತಾಂತರ : ಗೃಹ ಸಚಿವಾಲಯ ಪತ್ರ

ಹೊಸದಿಲ್ಲಿ : ಭಾರತದಲ್ಲಿ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ಬೆಲ್ಜಿಯಂನಲ್ಲಿ ಬಂಧನಕ್ಕೊಳಪಟ್ಟಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ದೇಶಕ್ಕೆ ಹಸ್ತಾಂತರ ಮಾಡಿದರೆ ಕಾನೂನು ರೀತಿ ನಡೆಸಿಕೊಳ್ಳುತ್ತೇವೆ ಎಂದು ಗೃಹಸಚಿವಾಲಯ ಪತ್ರ ಬರೆದಿದೆ.

ಬೆಲ್ಜಿಯಂನ ನ್ಯಾಯಾಂಗ ಅಧಿಕಾರಿಗಳಿಗೆ ಮತ್ತು ಸಚಿವಾಲಯಕ್ಕೆ ಕೇಂದ್ರ ಗೃಹಕಲ್ಯಾಣ ಇಲಾಖೆ ಪತ್ರ ಬರೆದಿದ್ದು, ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕೆಂದು ಔಪಚಾರಿಕವಾಗಿ ಮನವಿ ಮಾಡಿತ್ತು.

ನಿಮ್ಮ ದೇಶಕ್ಕೆ ಹಸ್ತಾಂತರ ಮಾಡಿದರೆ ಅವರನ್ನು ಕಾನೂನುಬದ್ಧವಾಗಿ ನಡೆಸಿಕೊಳ್ಳುತ್ತೀರಾ? ಎಂಬ ಪತ್ರಕ್ಕೆ ಉತ್ತರಿಸಿರುವ ಗೃಹ ಇಲಾಖೆ, ಆರೋಪಿಯನ್ನು ದೇಶದ ಕಾನೂನಿನ ಪ್ರಕಾರವೇ ನಡೆಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದೆ.

ಒಂದು ವೇಳೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಿದರೆ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಜೈಲಿನ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದೇವೆ. ವೈದ್ಯಕೀಯ ಚಿಕಿತ್ಸೆ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸುವ ಆಶ್ವಾಸನೆ ಕೊಡಲಾಗಿದೆ. ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಮನವಿ ಮಾಡಿಕೊಂಡಿದೆ.

ಐಪಿಸಿ ಸೆಕ್ಷನ್ ೧೨೦ ಬಿ, ೪೦೯, ೪೨೦, ೪೭೭ ಎ, ೨೦೧ ಹಾಗೂ ಭ್ರಷ್ಟಾಚಾರ ತಡೆಕಾಯ್ದೆ ೧೯೯೮ ಅಡಿ ವಿವಿಧ ದೂರುಗಳನ್ನು ಸಿಬಿಐ ದಾಖಲಿಸಿದೆ. ಪತ್ರದಲ್ಲಿ ಮೆಹುಲ್ ಚೋಕ್ಸಿಗೆ ನಿರ್ದಿಷ್ಟ ಸೌಲಭ್ಯ, ವಸತಿ ವ್ಯವಸ್ಥೆ, ವೈದ್ಯಕೀಯ ವೆಚ್ಚ, ಮೇಲ್ವಿಚಾರಣೆ ಕಾರ್ಯ ವಿಧಾನಗಳು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈ ಆರೋಪಿಯನ್ನು ತಕ್ಷಣವೇ ಹಸ್ತಾಂತರಿಸಬೇಕು.

ಆರೋಪಿಯನ್ನು ಮುಂಬೈನ ಅರ್ತೂರು ರಸ್ತೆಯಲ್ಲಿರುವ ಜೈಲಿನಲ್ಲಿ ಇಡಲಾಗುವುದು. ಆದಷ್ಟು ಶೀಘ್ರ ಹಸ್ತಾಂತರ ಮಾಡುವಂತೆ ಸಿಬಿಐ ಕೋರಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago