ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು ಮುಗಿಲುಮುಟ್ಟಿದ್ದವು. ಭಾರತಕ್ಕೆ ಬಂದ ಮೆಸ್ಸಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.
ಮೆಸ್ಸಿಯ ಪ್ರವಾಸದ ಸಂಘಟಕ ಸತಾದ್ರು ದತ್ತಾ ಈ ಬಗ್ಗೆ ಮಾತನಾಡಿದ್ದಾರೆ. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳಿರುವುದು ತುಂಬಾ ಸಂತೋಷ ತಂದಿದೆ. ಭಾರತದೊಂದಿಗೆ ಫುಟ್ಬಾಲ್ ಸಂಬಂಧವು ಪುನರುಜ್ಜೀವನಗೊಳ್ಳುತ್ತಿದೆ. ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಭಾರತೀಯ ಫುಟ್ಬಾಲ್ನೊಂದಿಗೆ ಸಂಬಂಧ ಹೊಂದಿರಲಿಲ್ಲ ಎಂದು ಸತಾದ್ರು ದತ್ತಾ ಹೇಳಿದ್ದಾರೆ.
ಮೆಸ್ಸಿ ನೋಡಲು ಮುಗಿಬಿದ್ದ ಫ್ಯಾನ್ಸ್
ಮೆಸ್ಸಿಯ ಕೋಲ್ಕತ್ತಾ ವೇಳಾಪಟ್ಟಿಯು ಆಯ್ದ ಅತಿಥಿಗಳು ಮತ್ತು ಸಂಘಟಕರಿಗೆ ಬೆಳಿಗ್ಗೆ 9:30 ರಿಂದ 10:30 ರವರೆಗೆ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗಿದೆ. ನಂತರ ಅವರು ಆನ್ಲೈನ್ನಲ್ಲಿ ತಮ್ಮ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ. ನಂತರ ಮೆಸ್ಸಿ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯುವ ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಇಲ್ಲಿ ಸಾವಿರಾರು ಜನರು ಕ್ರೀಡಾಂಗಣದಲ್ಲಿ ಸೇರಿದ್ದಾರೆ.
ಇದನ್ನೂ ಓದಿ:-ಟ್ರಂಪ್ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ
ಮೆಸ್ಸಿ ತಮ್ಮ ಸಹ ಆಟಗಾರರಾದ ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ. ಮೆಸ್ಸಿಯವರ ಭಾರತ ಪ್ರವಾಸವನ್ನು ‘ಗೋಟ್ ಟೂರ್’ (ಸಾರ್ವಕಾಲಿಕ ಶ್ರೇಷ್ಠ ಪ್ರವಾಸ) ಎಂದು ಕರೆಯಲಾಗಿದೆ. ಮುಂದಿನ 72 ಗಂಟೆಗಳಲ್ಲಿ ಅಂದರೆ ಮೂರು ದಿನಗಳ ವರೆಗೆ ಭಾರತದಲ್ಲಿ ಮೆಸ್ಸಿ ಇರಲಿದ್ದಾರೆ. ಈ ವೇಳೆ ಮೆಸ್ಸಿ ನಾಲ್ಕು ಪ್ರಮುಖ ನಗರಗಳಾದ ಕೋಲ್ಕತ್ತಾ, ಹೈದರಾಬಾದ್, ಮುಂಬೈ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಮುಖ್ಯಮಂತ್ರಿಗಳು, ಕಾರ್ಪೊರೇಟ್ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಹೀಗೆ ಲಿಯೋನಲ್ ಮೆಸ್ಸಿ ತಮ್ಮ ಭಾರತ ಪ್ರವಾಸವನ್ನು ಅದ್ದೂರಿಯಾಗಿ ಪೂರ್ಣಗೊಳಿಸಲಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…