ದೇಶ- ವಿದೇಶ

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿ, ಬಳಿಕ ಯು-ಟರ್ನ್ ಮಾಡಿ ಮರಳಿ ದೆಹಲಿಗೆ ತಿರುಗಿರುವ ಘಟನೆ ನಡೆದಿದೆ.

ವಿಮಾನವು ಸುಮಾರು 7 ಗಂಟೆ ಹಾರಾಟದ ನಂತರ ಇಥಿಯೋಪಿಯಾ-ಎರಿತ್ರಿಯಾ ಗಡಿಯ ಸಮೀಪ ತಿರುಗಿ ಬಂದಿದೆ.

ಇಂಡಿಗೋ ವಿಮಾನ ಸಂಖ್ಯೆ 6E33 (Boeing 787-9 ಡ್ರೀಮ್‌ಲೈನರ್) ಫ್ಲೈಟ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ ಹೊರಟಿ ಪರ್ಷಿಯನ್ ಗಲ್ಫ್ ಪ್ರದೇಶವನ್ನು ಪೂರ್ಣವಾಗಿ ತಪ್ಪಿಸಿ ಆಫ್ರಿಕಾ ಮಾರ್ಗವನ್ನು ಆಯ್ಕೆ ಮಾಡಿತ್ತು. ಆದರೆ ಇಥಿಯೋಪಿಯಾ ಗಡಿಯ ಹತ್ತಿರ ತಲುಪಿದಾಗ ಎರಿತ್ರಿಯಾ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿದ್ದರಿಂದ ಮುಂದುವರಿಯಲು ಸಾಧ್ಯವಾಗಿಲ್ಲ. ಬಳಿಕ ಹಠಾತ್‌ ಯು-ಟರ್ನ್‌ ಮಾಡಿ ದೆಹಲಿಗೆ ಮರಳಿದೆ.

ಇಂಡಿಗೋ ಅಧಿಕೃತ ಹೇಳಿಕೆ
6E33 ವಿಮಾನವು ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ತುರ್ತು ವಾಯುಪ್ರದೇಶ ನಿರ್ಬಂಧಗಳ ಕಾರಣ ದೆಹಲಿಗೆ ಮರಳಬೇಕಾಯಿತು. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ.” ಎರಿತ್ರಿಯಾ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗದ ಕಾರಣ ರಿಸ್ಕ್ ಅಸೆಸ್‌ಮೆಂಟ್ ನಂತರ ತಿರುಗಿ ಬರಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ಫೆಬ್ರವರಿ 28ರಿಂದ ಮಾರ್ಚ್ 3ರವರೆಗೆ ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ಇಂಡಿಗೋ 500ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿತ್ತು. ಇದು ಫೆಬ್ರವರಿ 26ರ ನಂತರದ ಮೊದಲ ದೆಹಲಿ-ಮ್ಯಾಂಚೆಸ್ಟರ್ ವಿಮಾನವಾಗಿತ್ತು. ಪ್ರಯಾಣಿಕರು ಸುಮಾರು 7 ಗಂಟೆಗಳ ಹಾರಾಟದ ನಂತರ ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.

ಪ್ರಯಾಣಿಕರಿಗೆ ತೊಂದರೆಯಾಗಿರುವುದಕ್ಕೆ ಇಂಡಿಗೋ ಕ್ಷಮೆ ಯಾಚಿಸಿದ್ದು, ಮುಂದಿನ ವಿಮಾನಗಳ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

58 seconds ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

31 mins ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

4 hours ago