ದೇಶ- ವಿದೇಶ

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿ, ಬಳಿಕ ಯು-ಟರ್ನ್ ಮಾಡಿ ಮರಳಿ ದೆಹಲಿಗೆ ತಿರುಗಿರುವ ಘಟನೆ ನಡೆದಿದೆ.

ವಿಮಾನವು ಸುಮಾರು 7 ಗಂಟೆ ಹಾರಾಟದ ನಂತರ ಇಥಿಯೋಪಿಯಾ-ಎರಿತ್ರಿಯಾ ಗಡಿಯ ಸಮೀಪ ತಿರುಗಿ ಬಂದಿದೆ.

ಇಂಡಿಗೋ ವಿಮಾನ ಸಂಖ್ಯೆ 6E33 (Boeing 787-9 ಡ್ರೀಮ್‌ಲೈನರ್) ಫ್ಲೈಟ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ ಹೊರಟಿ ಪರ್ಷಿಯನ್ ಗಲ್ಫ್ ಪ್ರದೇಶವನ್ನು ಪೂರ್ಣವಾಗಿ ತಪ್ಪಿಸಿ ಆಫ್ರಿಕಾ ಮಾರ್ಗವನ್ನು ಆಯ್ಕೆ ಮಾಡಿತ್ತು. ಆದರೆ ಇಥಿಯೋಪಿಯಾ ಗಡಿಯ ಹತ್ತಿರ ತಲುಪಿದಾಗ ಎರಿತ್ರಿಯಾ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿದ್ದರಿಂದ ಮುಂದುವರಿಯಲು ಸಾಧ್ಯವಾಗಿಲ್ಲ. ಬಳಿಕ ಹಠಾತ್‌ ಯು-ಟರ್ನ್‌ ಮಾಡಿ ದೆಹಲಿಗೆ ಮರಳಿದೆ.

ಇಂಡಿಗೋ ಅಧಿಕೃತ ಹೇಳಿಕೆ
6E33 ವಿಮಾನವು ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ತುರ್ತು ವಾಯುಪ್ರದೇಶ ನಿರ್ಬಂಧಗಳ ಕಾರಣ ದೆಹಲಿಗೆ ಮರಳಬೇಕಾಯಿತು. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ.” ಎರಿತ್ರಿಯಾ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗದ ಕಾರಣ ರಿಸ್ಕ್ ಅಸೆಸ್‌ಮೆಂಟ್ ನಂತರ ತಿರುಗಿ ಬರಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ಫೆಬ್ರವರಿ 28ರಿಂದ ಮಾರ್ಚ್ 3ರವರೆಗೆ ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ಇಂಡಿಗೋ 500ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿತ್ತು. ಇದು ಫೆಬ್ರವರಿ 26ರ ನಂತರದ ಮೊದಲ ದೆಹಲಿ-ಮ್ಯಾಂಚೆಸ್ಟರ್ ವಿಮಾನವಾಗಿತ್ತು. ಪ್ರಯಾಣಿಕರು ಸುಮಾರು 7 ಗಂಟೆಗಳ ಹಾರಾಟದ ನಂತರ ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.

ಪ್ರಯಾಣಿಕರಿಗೆ ತೊಂದರೆಯಾಗಿರುವುದಕ್ಕೆ ಇಂಡಿಗೋ ಕ್ಷಮೆ ಯಾಚಿಸಿದ್ದು, ಮುಂದಿನ ವಿಮಾನಗಳ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago