ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿ, ಬಳಿಕ ಯು-ಟರ್ನ್ ಮಾಡಿ ಮರಳಿ ದೆಹಲಿಗೆ ತಿರುಗಿರುವ ಘಟನೆ ನಡೆದಿದೆ.
ವಿಮಾನವು ಸುಮಾರು 7 ಗಂಟೆ ಹಾರಾಟದ ನಂತರ ಇಥಿಯೋಪಿಯಾ-ಎರಿತ್ರಿಯಾ ಗಡಿಯ ಸಮೀಪ ತಿರುಗಿ ಬಂದಿದೆ.
ಇಂಡಿಗೋ ವಿಮಾನ ಸಂಖ್ಯೆ 6E33 (Boeing 787-9 ಡ್ರೀಮ್ಲೈನರ್) ಫ್ಲೈಟ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ ಹೊರಟಿ ಪರ್ಷಿಯನ್ ಗಲ್ಫ್ ಪ್ರದೇಶವನ್ನು ಪೂರ್ಣವಾಗಿ ತಪ್ಪಿಸಿ ಆಫ್ರಿಕಾ ಮಾರ್ಗವನ್ನು ಆಯ್ಕೆ ಮಾಡಿತ್ತು. ಆದರೆ ಇಥಿಯೋಪಿಯಾ ಗಡಿಯ ಹತ್ತಿರ ತಲುಪಿದಾಗ ಎರಿತ್ರಿಯಾ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿದ್ದರಿಂದ ಮುಂದುವರಿಯಲು ಸಾಧ್ಯವಾಗಿಲ್ಲ. ಬಳಿಕ ಹಠಾತ್ ಯು-ಟರ್ನ್ ಮಾಡಿ ದೆಹಲಿಗೆ ಮರಳಿದೆ.
ಇಂಡಿಗೋ ಅಧಿಕೃತ ಹೇಳಿಕೆ
6E33 ವಿಮಾನವು ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ತುರ್ತು ವಾಯುಪ್ರದೇಶ ನಿರ್ಬಂಧಗಳ ಕಾರಣ ದೆಹಲಿಗೆ ಮರಳಬೇಕಾಯಿತು. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ.” ಎರಿತ್ರಿಯಾ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗದ ಕಾರಣ ರಿಸ್ಕ್ ಅಸೆಸ್ಮೆಂಟ್ ನಂತರ ತಿರುಗಿ ಬರಲು ನಿರ್ಧರಿಸಲಾಗಿದೆ ಎಂದು ಹೇಳಿದೆ.
ಫೆಬ್ರವರಿ 28ರಿಂದ ಮಾರ್ಚ್ 3ರವರೆಗೆ ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ಇಂಡಿಗೋ 500ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿತ್ತು. ಇದು ಫೆಬ್ರವರಿ 26ರ ನಂತರದ ಮೊದಲ ದೆಹಲಿ-ಮ್ಯಾಂಚೆಸ್ಟರ್ ವಿಮಾನವಾಗಿತ್ತು. ಪ್ರಯಾಣಿಕರು ಸುಮಾರು 7 ಗಂಟೆಗಳ ಹಾರಾಟದ ನಂತರ ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.
ಪ್ರಯಾಣಿಕರಿಗೆ ತೊಂದರೆಯಾಗಿರುವುದಕ್ಕೆ ಇಂಡಿಗೋ ಕ್ಷಮೆ ಯಾಚಿಸಿದ್ದು, ಮುಂದಿನ ವಿಮಾನಗಳ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…