ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು(ನ.21) ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.

ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.

ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

22 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

48 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 hour ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago