ದೇಶ- ವಿದೇಶ

ಎಂ.ಎಸ್.ಪಿ ಅಡಿ ಉದ್ದು, ಶೇಂಗಾ ಖರೀದಿಗೆ ಸಚಿವ ಚಲುವರಾಸ್ವಾಮಿ ಕೇಂದ್ರಕ್ಕೆ ಮನವಿ

ಹೊಸದಿಲ್ಲಿ : ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು.

ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು.

ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇವೆ. ರೈತರ ಪರವಾಗಿ SMAM, RKVY, ATMA, PMSKY, WDC ಮತ್ತು PDPS ನಂತಹ ಯೋಜನೆಗಳನ್ನು ಮಂಜೂರು ಮಾಡಿದ್ದಕ್ಕಾಗಿ, ಅದರಲ್ಲೂ ವಿಶೇಷವಾಗಿ ಕರ್ನಾಟಕದ ಮಾವು ಬೆಳೆಗಾರರಿಗೆ ಸಹಾಯ ಮಾಡಿದ್ದಕ್ಕಾಗಿ ನಾವು ಆಭಾರಿಯಾಗಿದ್ದೇವೆ ಎಂದು ಅವರು ಹೇಳಿದರು.

ಇದೇ ರೀತಿ ಬೆಲೆ ಕುಸಿತ ಎದುರಿಸುತ್ತಿರುವ ರೈತರ ತುರ್ತು ಅಗತ್ಯಗಳನ್ನು ಪೂರೈಸಿ ಸಂಕಷ್ಟದಿಂದ ಪಾರುಮಾಡುವಂತೆ ಸಚಿವರು ಮನವಿ ಮಾಡಿದರು.

ಕರ್ನಾಟಕದಲ್ಲಿ ರೈತರು ಯಾಂತ್ರೀಕೃತ ಕೃಷಿ ಪದ್ಧತಿಗಳನ್ನು ಹೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ SMAM ಯೋಜನೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ 2025-26ನೇ ಸಾಲಿಗೆ ರಾಜ್ಯಕ್ಕೆ ಹೆಚ್ಚುವರಿಯಾಗಿ 200 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಬೇಕೆಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು

ರಸಗೊಬ್ಬರ ಪೂರೈಕೆ
ಏಪ್ರಿಲ್‌ನಿಂದ ಸೆಪ್ಟೆಂಬರ್ 2025ರ ಅವಧಿಗೆ ನಮಗೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಇನ್ನೂ ಬಾಕಿ ಇದೆ. ದಯವಿಟ್ಟು ಆದಷ್ಟು ಬೇಗ ಪೂರೈಸಲು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು

ಕೃಷಿ ವಿಶ್ವವಿದ್ಯಾಲಯಕ್ಕೆ ಮಾನ್ಯತೆ
ಮಂಡ್ಯದಲ್ಲಿ ಹೊಸದಾಗಿ ಪ್ರಾರಂಭವಾದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ICAR ನಿಂದ ಔಪಚಾರಿಕ ಮಾನ್ಯತೆ ಮತ್ತು ಅಗತ್ಯ ಅನುದಾನ ನೀಡಬೇಕು. ಜೊತೆಗೆ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳು (KVK) ಮತ್ತು ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ (AICRP) ಕೇಂದ್ರಗಳನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಬೇಕೆಂದು ಅವರು ಕೋರಿದರು.

RKVY ಯೋಜನೆಗಳು: ರೈತರ ಕಲ್ಯಾಣಕ್ಕಾಗಿ RKVY ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಿ, ಅಗತ್ಯವಿರುವ ಹೆಚ್ಚುವರಿ ನಿಧಿಯನ್ನು ಮಂಜೂರು ಮಾಡುವಂತೆ ಚಲುವರಾಯಸ್ವಾಮಿ ಮನವಿ‌ ಮಾಡಿದರು.

ನಮ್ಮ ರಾಜ್ಯದ ರೈತರ ಹಿತ ಕಾಪಾಡುವ ಈ ನಿಟ್ಟಿನಲ್ಲಿ ಕೇಂದ್ರದ ಬೆಂಬಲ ಮತ್ತು ಸಕಾರಾತ್ಮಕ ಪ್ರತಿಕ್ರಿಯೆ ಎದುರು ನೋಡುತ್ತಿದ್ದೇವೆ. ಇದರಿಂದ ರೈತರ ಬದುಕು ಇನ್ನಷ್ಟು ಉತ್ತಮವಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ,ರಾಜ್ಯ ಸಚಿವರಾದ ಭಗೀರಥ ಚೌಧರಿ ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಹಾಗೂ ಅಧಿಕಾರಿಗಳು ಕಾರ್ಯದಲ್ಲಿ ಪಾಲ್ಗೊಂಡಿದ್ದರು

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago