ದೇಶ- ವಿದೇಶ

ನನ್ನ ದೆಹಲಿ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ: ಓವೈಸಿ

ನವದೆಹಲಿ: ಲೋಕಸಭಾ ಸಂಸದ ಅಸಾದುದ್ದೀನ್‌ ಓವೈಸಿ ಅವರು ಗುರುವಾರ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಆಗಾಗ ನನ್ನ ಮನೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಘಟನೆ ಬಗ್ಗೆ ಬರೆದುಕೊಂಡಿರುವ ಅವರು, ನಿನ್ನೆ ಕೆಲ ಅಪರಿಚಿತ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ದೂರಿದರು.

ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಟ್ಯಾಗ್ ಮಾಡಿರುವ ಓವೈಸಿ, ಗೃಹ ಸಚಿವರ ಮೇಲ್ವಿಚಾರಣೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ, ಸಂಸದರ ಸುರಕ್ಷತೆಯ ಭರವಸೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ ಎಂದಿದ್ದಾರೆ.

ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ. ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ. ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ ಎಂದು ಸವಾಲು ಹಾಕಿದ್ದಾರೆ.

ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದು ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಹಲವು ಬಿಜೆಪಿ ನಾಯಕರು ಓವೈಸಿ ವಿರುದ್ಧ ಕಿಡಿಕಾರಿದ್ದರು.

ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ಓವೈಸಿ ಮನೆ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿದೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. 2022ರಲ್ಲಿ ಉತ್ತರ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

1 hour ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

1 hour ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

2 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 hours ago

ಕೇಂದ್ರ ಬಜೆಟ್:‌ ಯಾವ ವಸ್ತುಗಳ ದರ ಏರಿಕೆ? ಯಾವುದು ಇಳಿಕೆ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…

3 hours ago