ನವದೆಹಲಿ: ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರು ಗುರುವಾರ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಆಗಾಗ ನನ್ನ ಮನೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಘಟನೆ ಬಗ್ಗೆ ಬರೆದುಕೊಂಡಿರುವ ಅವರು, ನಿನ್ನೆ ಕೆಲ ಅಪರಿಚಿತ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ದೂರಿದರು.
ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಟ್ಯಾಗ್ ಮಾಡಿರುವ ಓವೈಸಿ, ಗೃಹ ಸಚಿವರ ಮೇಲ್ವಿಚಾರಣೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ, ಸಂಸದರ ಸುರಕ್ಷತೆಯ ಭರವಸೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ ಎಂದಿದ್ದಾರೆ.
ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ. ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ. ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ ಎಂದು ಸವಾಲು ಹಾಕಿದ್ದಾರೆ.
ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದು ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಹಲವು ಬಿಜೆಪಿ ನಾಯಕರು ಓವೈಸಿ ವಿರುದ್ಧ ಕಿಡಿಕಾರಿದ್ದರು.
ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ಓವೈಸಿ ಮನೆ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿದೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. 2022ರಲ್ಲಿ ಉತ್ತರ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿತ್ತು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…