ದೇಶ- ವಿದೇಶ

ನನ್ನ ದೆಹಲಿ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ: ಓವೈಸಿ

ನವದೆಹಲಿ: ಲೋಕಸಭಾ ಸಂಸದ ಅಸಾದುದ್ದೀನ್‌ ಓವೈಸಿ ಅವರು ಗುರುವಾರ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಆಗಾಗ ನನ್ನ ಮನೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಘಟನೆ ಬಗ್ಗೆ ಬರೆದುಕೊಂಡಿರುವ ಅವರು, ನಿನ್ನೆ ಕೆಲ ಅಪರಿಚಿತ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ದೂರಿದರು.

ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಟ್ಯಾಗ್ ಮಾಡಿರುವ ಓವೈಸಿ, ಗೃಹ ಸಚಿವರ ಮೇಲ್ವಿಚಾರಣೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ, ಸಂಸದರ ಸುರಕ್ಷತೆಯ ಭರವಸೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ ಎಂದಿದ್ದಾರೆ.

ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ. ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ. ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ ಎಂದು ಸವಾಲು ಹಾಕಿದ್ದಾರೆ.

ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದು ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಹಲವು ಬಿಜೆಪಿ ನಾಯಕರು ಓವೈಸಿ ವಿರುದ್ಧ ಕಿಡಿಕಾರಿದ್ದರು.

ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ಓವೈಸಿ ಮನೆ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿದೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. 2022ರಲ್ಲಿ ಉತ್ತರ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

16 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

22 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago