ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ಇರಾನ್ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ.
ಇರಾನ್ನ ಬುಶೆಹರ್ ಪರಮಾಣು ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ದಕ್ಷಿಣ ಇರಾನ್ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು.
ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಆವರಣದ ಬಳಿ ಒಂದು ಕ್ಷಿಪಣಿ ಅಪ್ಪಳಿಸಿದ ಬಗ್ಗೆ ಇರಾನ್ನಿಂದ ಮಾಹಿತಿ ಪಡೆಯಲಾಗಿದೆ ಎಂದು ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (ಐಎಇಎ) ಶನಿವಾರ ತಿಳಿಸಿದೆ. ಸೈಟ್ನ ಭೌತಿಕ ರಕ್ಷಣಾ ಸಿಬ್ಬಂದಿಗಳಲ್ಲಿ ಒಬ್ಬರು ‘ಪ್ರೊಜೆಕ್ಟ್ತ್ಯೈಲ್ ತುಣುಕಿನಿಂದ’ ಸಾವನ್ನಪ್ಪಿದ್ದಾರೆ ಮತ್ತು ಸೈಟ್ನಲ್ಲಿರುವ ಕಟ್ಟಡವು ಆಘಾತ ತರಂಗಗಳು ಮತ್ತು ತುಣುಕುಗಳಿಂದ ಪ್ರಭಾವಿತವಾಗಿದೆ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
ವಿಕಿರಣ ಸೋರಿಕೆಯಾಗಿಲ್ಲ
ಇದೇ ವೇಳೆ ಘಟನಾ ಸ್ಥಳದಲ್ಲಿ ಯಾವುದೇ ರೀತಿಯ ವಿಕಿರಣ ಸೋರಿಕೆಯಾಗಿಲ್ಲ. ವಿಕಿರಣ ಮಟ್ಟದಲ್ಲಿ ಯಾವುದೇ ಹೆಚ್ಚಳ ವರದಿಯಾಗಿಲ್ಲ ಎಂದೂ ಐಎಇಎ ಹೇಳಿದೆ. ಅಲ್ಲದೆ ಈ ಘಟನೆಯು ಸ್ಥಾವರದ ಮುಖ್ಯ ಭಾಗಗಳಿಗೆ ಹಾನಿಯಾಗಿಲ್ಲ ಮತ್ತು ಉತ್ಪಾದನೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…