ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗೆ ಸೇರಿದ ನೌಕರರು ಮತ್ತು ಕಾರ್ಮಿಕರು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಷ್ಕರದಿಂದಾಗಿ ಹಲವು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.
ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದಕ್ಕಾಗಿ 30 ಕೋಟಿ ಕಾರ್ಮಿಕರನ್ನು ಸಜ್ಜುಗೊಳಿಸಲಾಗಿತ್ತು ಎಂದು ಕಾರ್ಮಿಕ ಸಂಘಗಳ ಜಂಟಿ ವೇದಿಕೆ ತಿಳಿಸಿದೆ. ಈ ಕುರಿತು ಮಾತನಾಡಿರುವ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್ಜೀತ್ ಕೌರ್, ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಕರೆ ನೀಡಲಾಗಿತ್ತು. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.
ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಸಂಚಾರ ವ್ಯವಸ್ಥೆ ಮೇಲೆ ಬಂದ್ ಪರಿಣಾಮ ಬೀರಿದೆ ಎಂದರು.
ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟ (ಸಿಐಟಿಯು), ಅಖಿಲ ಭಾರತ ಕಾರ್ಮಿಕ ಸಂಘಗಳ ಕಾಂಗ್ರೆಸ್ (ಎಐಟಿಯುಸಿ), ಭಾರತೀಯ ರಾಷ್ಟ್ರೀಯ ಕಾರ್ಮಿಕ ಸಂಘಗಳ ಕಾಂಗ್ರೆಸ್ (ಐಎನ್ಟಿಯುಸಿ), ಹಿಂದ್ ಮಜ್ದೂರ್ ಸಭಾ (ಎಚ್ಎಂಎಸ್) ಮತ್ತು ಇತರ ಹಲವಾರು ಪ್ರಮುಖ ಕಾರ್ಮಿಕ ಸಂಘಗಳು ಜಂಟಿಯಾಗಿ ಬಂದ್ಗೆ ಕರೆಕೊಟ್ಟಿದ್ದವು.
ಹೊಸದಿಲ್ಲಿ ವರದಿ
ಬಂದ್ ಹಿನ್ನೆಲೆಯಲ್ಲಿ ನವದೆಹಲಿಯ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪರಿಣಾಮವಾಗಿ, ರಸ್ತೆಗಳಲ್ಲಿ ಸಂಚಾರ ಕಡಿಮೆಯಾಗಿತ್ತು. ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ, ಕಲ್ಲಿದ್ದಲು ಮತ್ತು ಕಲ್ಲಿದ್ದಲೇತರ ಗಣಿಗಳು, ಅನಿಲ ಪೈಪ್ಲೈನ್ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಬಂದ್ ಪರಿಣಾಮ ಬೀರಿತ್ತು.
ತಮಿಳುನಾಡು, ಕೇರಳ ವರದಿ
ಬಂದ್ ಪರಿಣಾಮವಾಗಿ ತಮಿಳುನಾಡು, ಕೇರಳದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿತ್ತು. ಡಿಎಂಕೆ ಸರ್ಕಾರ ಬಂದ್ ಬೆಂಬಲಿಸಿದೆ. ಒಡಿಶಾದ ಭುವನೇಶ್ವದಲ್ಲಿಯೂ ಬಂದ್ ಬೆಂಬಲಿಸಿ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಗೋವಾ ವರದಿ
ಗೋವಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬ್ಯಾಂಕಿಂಗ್ ಕಾರ್ಯಾಚರಣೆಗಳ ಮೇಲೆ ಬಂದ್ ಪರಿಣಾಮ ಬೀರಿದೆ. ಇತರೆ ಅಗತ್ಯ ಸೇವೆಗಳ ಮೇಲೆ ಹೆಚ್ಚು ಪರಿಣಾಮವಾಗಿಲ್ಲ. ಮುಷ್ಕರ ಬೆಂಬಲಿಸಿ ಕಾರ್ಮಿಕ ಸಂಘಗಳು ವಿವಿಧ ಕೈಗಾರಿಕಾ ಎಸ್ಟೇಟ್ಗಳಲ್ಲಿ ಕೆಲಸ ಸ್ಥಗಿತಗೊಳಿಸಿವೆ.
ಪಶ್ಚಿಮ ಬಂಗಾಳ ವರದಿ
ಪಶ್ಚಿಮ ಬಂಗಾಳದಲ್ಲಿ ಬಂದ್ ಜನಜೀವನದ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ. ಕೇಂದ್ರ ಮತ್ತು ರಾಜ್ಯ ನಾಗರಿಕ ಸೇವೆಗಳ ನೌಕರರು ಮತ್ತು ಶಿಕ್ಷಕರು, ಕೇಂದ್ರ ಮತ್ತು ರಾಜ್ಯ ಸಾರ್ವಜನಿಕ ವಲಯದ ಸಂಸ್ಥೆಗಳ ಕಾರ್ಮಿಕರ ಗುಂಪುಗಳು ಮತ್ತು ಸ್ವತಂತ್ರ ಕಾರ್ಮಿಕ ಸಂಘಗಳು ಬಂದ್ ಕರೆಗೆ ಬೆಂಬಲ ನೀಡಿವೆಯಾದರೂ, ಜನ ಜೀವನಕ್ಕೆ ತೊಂದರೆಯಾಗಿಲ್ಲ. ವಾಹನ ಸಂಚಾರವೂ ಎಂದಿನಂತಿತ್ತು.
ಮಧ್ಯ ಪ್ರದೇಶ ವರದಿ
ಮಧ್ಯ ಪ್ರದೇಶದಲ್ಲಿ ರಕ್ಷಣಾ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 25,000ಕ್ಕೂ ಹೆಚ್ಚು ನೌಕರರು ಒಂದು ಗಂಟೆ ತಡವಾಗಿ ಕೆಲಸಕ್ಕೆ ಹಾಜರಾದರು ಎಂದು ಅಖಿಲ ಭಾರತ ರಕ್ಷಣಾ ನೌಕರರ ಒಕ್ಕೂಟ ತಿಳಿಸಿದೆ.
ಬೇಡಿಕೆಗಳೇನು?:
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…