ನವದೆಹಲಿ: ಬಿಜೆಪಿಯಲ್ಲಿನ ಭಿನ್ನಮತ, ಒಳಜಗಳ ಹಾದಿ ಬೀದಿ ರಂಪಾಟವಾಗಿ ಮಾರ್ಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ವಿಜಯೇಂದ್ರ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ನಡೆಸುತ್ತಿದ್ದಾರೆ. ಅವರ ಬಂಡವಾಳ ಏನೆಂಬುದು ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ತಿಳಿದಿದೆ. ನಕಲಿ ಸಹಿ ಮಾಡಿ ಭ್ರಷ್ಟಾಚಾರ ನಡೆಸಿದ್ದಾರೆ. ನಮ್ಮದು ಹಿಂದುತ್ವದ ಪರ, ವಂಶವಾದದ ವಿರುದ್ಧದ ಹೋರಾಟ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ವಿಜಯೇಂದ್ರ ಪರ ಮಾತನಾಡಲು ಯಾರೂ ಇಲ್ಲ. ನಾವು ಬರೀ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಮಾಡುತ್ತೇವೆ. ಕುಟುಂಬ ರಾಜಕಾರಣ ನಮಗೆ ಮುಖ್ಯವಲ್ಲ ಎಂದರು.
ಈ ಮೂಲಕ ಶಾಸಕ ಯತ್ನಾಳ್ ಅವರು ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂದು ಪಣ ತೊಟ್ಟಿದ್ದು, ಆಪ್ತರ ಜೊತೆ ಸೇರಿಕೊಂಡು ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…