ರಾಷ್ಟ್ರೀಯ

ಮತದಾನದ ವೇಳೆ ಕ್ಷೇತ್ರದ ಶಾಸಕನ ಉದ್ಧಟತನ: ಮತದಾರನಿಂದ ಕಪಾಳಮೋಕ್ಷ

ಗುಂಟುರು(ಆಂಧ್ರಪ್ರದೇಶ): ಮತದಾನದ ವೇಳೆ ಮತ ಹಾಕಲು ಹೋದ ಶಾಸಕ ಉದ್ದಟತನ ಮೆರೆದ ಕಾರಣ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ಜಿಲ್ಲೆಯ ತೆನಾಲಿ ವಿಧನಸಭಾ ಕ್ಷೇತ್ರದಲ್ಲಿ ನಡೆದಿದೆ.

ಕ್ಷೇತ್ರ ವ್ಯಾಪ್ತಿಯ ಐತಾನಗರದ ಮತಗಟ್ಟೆಗೆ ಮತ ಹಾಕಲು ಬಂದ ವೈಎಸ್‌ಆರ್‌ಸಿಪಿ ಶಾಸಕ ಶಿವಕುಮಾರ್ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ಒಳಗೆ ನುಗ್ಗಿದರು. ಈ ವೇಳೆ ಮತದಾರ ಸರತಿ ಸಾಲಿನಲ್ಲಿ ಬರುವಂತೆ ಒತ್ತಾಯಿಸಿದರು. ಇದರಿಂದ ಸಿಟ್ಟಾದ ಶಾಸಕ ಮತದಾರನಿಗೆ ಕಪಾಳಮೋಕ್ಷ ಮಾಡಿದರು. ಕೂಡಲೇ ಮತದಾರ ಕೂಡ ಶಾಸಕ ಶಿವಕುಮಾರ್‌ ಅವರ ಕೆನ್ನೆಗೆ ಬಾರಿಸಿದ. ಇದರಿಂದ ಕುಪಿತಗೊಂಡ ಶಾಸಕರ ಬೆಂಬಲಿಗರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮತದಾರ ಗಂಭೀರವಾಗಿ ಗಾಯಗೊಂಡಿದ್ದು, ಈ ಘಟನೆಯಿಂದ ಮತಗಟ್ಟೆ ಕೇಂದ್ರಕ್ಕೆ ಬಂದಿದ್ದ ಮತದಾರರೆಲ್ಲರೂ ಭಯಭೀತಗೊಂಡಿದ್ದರು.

ಮತದಾರರ ಮೇಲೆ ಹಲ್ಲೆಯ ಬಗ್ಗೆ ವಿಶೇಷ ಪೊಲೀಸ್‌ ವೀಕ್ಷಕ ಮಿಶ್ರಾ ಆಕ್ರೋಶ ವ್ಯಕ್ತಪಡಿಸಿ, ಘಟನೆಯ ದೃಶ್ಯವಳಿಯನ್ನು ತರುವಂತೆ ಆದೇಶಿಸಿದರು. ದೃಶ್ಯವಳಿ ವೀಕ್ಷಿಸಿದ ಅವರು ಹಿಂಸಾತ್ಮಕ ಘಟನೆ ನಡೆಯದಂತೆ ಮತಗಟ್ಟೆ ಅಧಿಕಾರಿಗೆ ಸೂಚಿಸಿ ಯಾವುದೇ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago