ದೇಶ- ವಿದೇಶ

ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ

ನವದೆಹಲಿ : ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ರಷ್ಟು ಕಡಿತ ಮಾಡುವುದಾಗಿ ಸಚಿವೆ  ನಿರ್ಮಾಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌ , ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ರಷ್ಟು ಕಡಿತ ಮಾಡಲಾಗುವುದು. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.೬ ಮತ್ತು ಪ್ಲಾಟಿನಂ ಮೇಲೆ ೬.೫ ಗೆ ಇಳಿಕೆ ಮಾಡಲಾಗಿದೆ. ಮೊಬೈಲ್‌ ಹಾಗೂ ಚಾರ್ಜರ್‌ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ. ಜೊತೆಗೆ ಇ ಕಾಮರ್ಸ್‌ ಮೇಲಿನ TDS ಇಳಿಸಲಾಗಿದೆ. ಟಿಡಿಎಸ್‌ ಐಟಿ ಸಲ್ಲಿಕೆ ತಡವಾದರೆ ದಂಡ ಇಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಮೂರು ಕ್ಯಾನ್ಸರ್‌ ಔಷಧಗಳ ಮೇಲಿನ ಕಸ್ಟಮ್ಸ್‌ ಡ್ಯೂಟಿ ತೆರವುಗೊಳಿಸಲಾಗುವುದು. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿದೆ. ಎಕ್ಸ್‌ ರೇ ಟ್ಯೂಬ್‌ ಗಳು ಮತ್ತು ಫ್ಲಾಟ್‌ ಪ್ಯಾನಲ್‌ ಡಿಟೆಕ್ಟರ್‌ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ ೬ ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ ೬.೪ ರಷ್ಟು ಕಡಿಮೆ ಮಾಡಲಾಗುವುದು ಎಂದು ಬಜೆಟ್‌ ನಲ್ಲಿ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

7 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

8 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

8 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

8 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

8 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

9 hours ago