ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ೨೦೨೪ ಮತ್ತು ೨೫ ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ೩ನೇ ಅವಧಿಯ ಮೊದಲ ಬಜೆಟ್ ಇದಾಗಿದ್ದು, ಇದೇ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್ ೭ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಇಂದಿನ ಬಜೆಟ್ ಮುಖ್ಯಾಂಶಗಳು
- ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ ೧.೫೨ ಲಕ್ಷ ಕೋಟಿ
- ಉದ್ಯೋಗ ಕೌಶಲ್ಯ ಅಭಿವೃದ್ಧಿಗೆ ೧.೪೮ ಲಕ್ಷ ಕೋಟಿ
- ಗ್ರಾಮೀಣಾಭಿವೃದ್ಧಿಗೆ ೨.೬೬ ಲಕ್ಷ ಕೋಟಿ
- ಶಿಕ್ಷಣ, ಉದ್ಯೋಗ ಕೌಶಲ್ಯಾಭಿವೃದ್ಧಿಗಾಗಿ ೧.೪೮ ಕೋಟಿ
- ೩ ಲಕ್ಷದ ವರೆಗೆ ಯಾವುದೇ ರೀತಿಯ ತೆರಿಗೆ ಇಲ್ಲ
- ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ೫ ವರ್ಷ ವಿಸ್ತರಣೆ
- ವರ್ಷದಲ್ಲಿ ೧ ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ
- ಉನ್ನತ್ತ ಶಿಕ್ಷಣಕ್ಕೆ ಸರ್ಕಾರದಿಂದ ೧೦ ಲಕ್ಷ ರೂ ವರೆಗೆ ಸಾಲ ಸೌಲಭ್ಯ
- ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ
- ೫ ವರ್ಷದಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
- ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್
- ಎನ್ ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷವಾದ ಅನುದಾನ
- ೫ ವರ್ಷಗಳಲ್ಲಿ ಟಾಪ್ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶ
- ಪಿಎಂ ಆವಾಸ್ ಯೋಜನೆಯಡಿ ೩ ಕೋಟಿ ಮನೆಗಳ ನಿರ್ಮಾಣ ಗುರಿ
- ಮಹಿಳೆಯರಿಗೆ ೩ ಸಾವಿರ ಕೋಟಿಗೂ ಹೆಚ್ಚು ಅನುದಾನ
- ದೇಶದಲ್ಲಿ ೧೨ ಹೊಸ ಇಂಡಸ್ಟ್ರೀಯಲ್ ಪಾರ್ಕ್ ಗಳ ನಿರ್ಮಾಣ
- ಪ್ರಧಾನ ಮಂತ್ರಿ ಸೂರ್ಯೋಘರ್ ಉಚಿತ ವಿದ್ಯುತ್ ಯೋಜನೆ
- ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದಿಂದ ಒತ್ತು
- ೧೦೦ MW ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ
- ಮೊಬೈಲ್ ಹಾಗೂ ಚಾರ್ಜರ್ಗಳ ಮೇಲಿನೆ ತೆರಿಗೆ ಇಳಿಕೆ
- ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ ರಷ್ಟು ಇಳಿಕೆ
- ಮೂರು ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ಸ್ ಡ್ಯೂಟಿ ತೆರವು
- ಸ್ಟ್ರೀಟ್ ಫುಡ್ ಹಬ್ ಸ್ಥಾಪನೆ
- ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣ
- ಇ ಕಾಮರ್ಸ್ ಮೇಲಿನ TDS ಇಳಿಕೆ
- ಡಿಜಿಟಲ್ ಭೂ ಆಧಾರ್ ಯೋಜನೆ ಘೋಷಣೆ
- ನೂರು ದೊಡ್ಡ ನಗರದಲ್ಲಿ ಸಂಸ್ಕರಿಸಿದ ನೀರಿನ ಘಟಕ
- ಪ್ರವಾಹ ನಿಯಂತ್ರಣಕ್ಕೆ ೧೧೫೦೦ ಕೋಟಿ ಪ್ಯಾಕೇಜ್
- ಸಣ್ಣ ಕೈಗಾರಿಕೆಗಳಿಗೆ ಬಡ್ಡಿ ರಹಿತ ಸಾಲ
- ನಗರ ಪ್ರದೇಶದ ಬಡವರ ವಸತಿಗಾಗಿ ೧೦ ಲಕ್ಷ ಕೋಟಿ
- ೪೦೦ ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ
- ೨೬ ಸಾವಿರ ಕೋಟಿ ವೆಚ್ಚದಲ್ಲಿ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ
- ಆಂಧ್ರಪ್ರದೇಶದ ಹೊಸ ರಾಜಧಾನಿಗೆ ೧೫೦೦೦ ಕೋಟಿ
- ಮುದ್ರಾ ಸಾಲದ ಮಿತಿ ೨೦ ಲಕ್ಷಕ್ಕೆ ಹೆಚ್ಚಳ





