ದೇಶ- ವಿದೇಶ

2024-25ನೇ ಸಾಲಿನ ಕೇಂದ್ರ ಬಜೆಟ್ ಮುಖ್ಯಾಂಶಗಳು

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ೨೦೨೪ ಮತ್ತು ೨೫ ನೇ ಸಾಲಿನ ಬಜೆಟ್‌ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ೩ನೇ ಅವಧಿಯ ಮೊದಲ ಬಜೆಟ್‌ ಇದಾಗಿದ್ದು, ಇದೇ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್‌ ೭ ಬಾರಿ ಬಜೆಟ್‌ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇಂದಿನ ಬಜೆಟ್‌ ಮುಖ್ಯಾಂಶಗಳು

  • ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ ೧.೫೨ ಲಕ್ಷ ಕೋಟಿ
  • ಉದ್ಯೋಗ ಕೌಶಲ್ಯ ಅಭಿವೃದ್ಧಿಗೆ ೧.೪೮ ಲಕ್ಷ ಕೋಟಿ
  • ಗ್ರಾಮೀಣಾಭಿವೃದ್ಧಿಗೆ ೨.೬೬ ಲಕ್ಷ ಕೋಟಿ
  • ಶಿಕ್ಷಣ, ಉದ್ಯೋಗ ಕೌಶಲ್ಯಾಭಿವೃದ್ಧಿಗಾಗಿ ೧.೪೮ ಕೋಟಿ
  • ೩ ಲಕ್ಷದ ವರೆಗೆ ಯಾವುದೇ ರೀತಿಯ ತೆರಿಗೆ ಇಲ್ಲ
  • ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ೫ ವರ್ಷ ವಿಸ್ತರಣೆ
  • ವರ್ಷದಲ್ಲಿ ೧ ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ
  • ಉನ್ನತ್ತ ಶಿಕ್ಷಣಕ್ಕೆ ಸರ್ಕಾರದಿಂದ ೧೦ ಲಕ್ಷ ರೂ ವರೆಗೆ ಸಾಲ ಸೌಲಭ್ಯ
  • ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ
  • ೫ ವರ್ಷದಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
  • ಹೈದರಾಬಾದ್‌ ಬೆಂಗಳೂರು ಕೈಗಾರಿಕಾ ಕಾರಿಡಾರ್‌
  • ಎನ್‌ ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷವಾದ ಅನುದಾನ
  • ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶ
  • ಪಿಎಂ ಆವಾಸ್‌ ಯೋಜನೆಯಡಿ ೩ ಕೋಟಿ ಮನೆಗಳ ನಿರ್ಮಾಣ ಗುರಿ
  • ಮಹಿಳೆಯರಿಗೆ ೩ ಸಾವಿರ ಕೋಟಿಗೂ ಹೆಚ್ಚು ಅನುದಾನ
  • ದೇಶದಲ್ಲಿ ೧೨ ಹೊಸ ಇಂಡಸ್ಟ್ರೀಯಲ್‌ ಪಾರ್ಕ್‌ ಗಳ ನಿರ್ಮಾಣ
  • ಪ್ರಧಾನ ಮಂತ್ರಿ ಸೂರ್ಯೋಘರ್‌ ಉಚಿತ ವಿದ್ಯುತ್‌ ಯೋಜನೆ
  • ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದಿಂದ ಒತ್ತು
  • ೧೦೦ MW ವಾಣಿಜ್ಯ ಉಷ್ಣ ವಿದ್ಯುತ್‌ ಸ್ಥಾವರ ಸ್ಥಾಪನೆ
  • ಮೊಬೈಲ್‌ ಹಾಗೂ ಚಾರ್ಜರ್ಗಳ ಮೇಲಿನೆ ತೆರಿಗೆ ಇಳಿಕೆ
  • ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ ರಷ್ಟು ಇಳಿಕೆ
  • ಮೂರು ಕ್ಯಾನ್ಸರ್‌ ಔಷಧಿಗಳ ಮೇಲಿನ ಕಸ್ಟಮ್ಸ್‌ ಡ್ಯೂಟಿ ತೆರವು
  • ಸ್ಟ್ರೀಟ್‌ ಫುಡ್‌ ಹಬ್‌ ಸ್ಥಾಪನೆ
  • ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣ
  • ಇ ಕಾಮರ್ಸ್‌ ಮೇಲಿನ TDS ಇಳಿಕೆ
  • ಡಿಜಿಟಲ್‌ ಭೂ ಆಧಾರ್‌ ಯೋಜನೆ ಘೋಷಣೆ
  • ನೂರು ದೊಡ್ಡ ನಗರದಲ್ಲಿ ಸಂಸ್ಕರಿಸಿದ ನೀರಿನ ಘಟಕ
  • ಪ್ರವಾಹ ನಿಯಂತ್ರಣಕ್ಕೆ ೧೧೫೦೦ ಕೋಟಿ ಪ್ಯಾಕೇಜ್‌
  • ಸಣ್ಣ ಕೈಗಾರಿಕೆಗಳಿಗೆ ಬಡ್ಡಿ ರಹಿತ ಸಾಲ
  • ನಗರ ಪ್ರದೇಶದ ಬಡವರ ವಸತಿಗಾಗಿ ೧೦ ಲಕ್ಷ ಕೋಟಿ
  • ೪೦೦ ಜಿಲ್ಲೆಗಳಲ್ಲಿ ಡಿಜಿಟಲ್‌ ಬೆಳೆ ಸಮೀಕ್ಷೆ
  • ೨೬ ಸಾವಿರ ಕೋಟಿ ವೆಚ್ಚದಲ್ಲಿ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ
  • ಆಂಧ್ರಪ್ರದೇಶದ ಹೊಸ ರಾಜಧಾನಿಗೆ ೧೫೦೦೦ ಕೋಟಿ
  • ಮುದ್ರಾ ಸಾಲದ ಮಿತಿ ೨೦ ಲಕ್ಷಕ್ಕೆ ಹೆಚ್ಚಳ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

7 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

20 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

41 mins ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

1 hour ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

2 hours ago