ದೇಶ- ವಿದೇಶ

2024-25ನೇ ಸಾಲಿನ ಕೇಂದ್ರ ಬಜೆಟ್ ಮುಖ್ಯಾಂಶಗಳು

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ೨೦೨೪ ಮತ್ತು ೨೫ ನೇ ಸಾಲಿನ ಬಜೆಟ್‌ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ೩ನೇ ಅವಧಿಯ ಮೊದಲ ಬಜೆಟ್‌ ಇದಾಗಿದ್ದು, ಇದೇ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್‌ ೭ ಬಾರಿ ಬಜೆಟ್‌ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇಂದಿನ ಬಜೆಟ್‌ ಮುಖ್ಯಾಂಶಗಳು

  • ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ ೧.೫೨ ಲಕ್ಷ ಕೋಟಿ
  • ಉದ್ಯೋಗ ಕೌಶಲ್ಯ ಅಭಿವೃದ್ಧಿಗೆ ೧.೪೮ ಲಕ್ಷ ಕೋಟಿ
  • ಗ್ರಾಮೀಣಾಭಿವೃದ್ಧಿಗೆ ೨.೬೬ ಲಕ್ಷ ಕೋಟಿ
  • ಶಿಕ್ಷಣ, ಉದ್ಯೋಗ ಕೌಶಲ್ಯಾಭಿವೃದ್ಧಿಗಾಗಿ ೧.೪೮ ಕೋಟಿ
  • ೩ ಲಕ್ಷದ ವರೆಗೆ ಯಾವುದೇ ರೀತಿಯ ತೆರಿಗೆ ಇಲ್ಲ
  • ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ೫ ವರ್ಷ ವಿಸ್ತರಣೆ
  • ವರ್ಷದಲ್ಲಿ ೧ ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ
  • ಉನ್ನತ್ತ ಶಿಕ್ಷಣಕ್ಕೆ ಸರ್ಕಾರದಿಂದ ೧೦ ಲಕ್ಷ ರೂ ವರೆಗೆ ಸಾಲ ಸೌಲಭ್ಯ
  • ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ
  • ೫ ವರ್ಷದಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
  • ಹೈದರಾಬಾದ್‌ ಬೆಂಗಳೂರು ಕೈಗಾರಿಕಾ ಕಾರಿಡಾರ್‌
  • ಎನ್‌ ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷವಾದ ಅನುದಾನ
  • ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶ
  • ಪಿಎಂ ಆವಾಸ್‌ ಯೋಜನೆಯಡಿ ೩ ಕೋಟಿ ಮನೆಗಳ ನಿರ್ಮಾಣ ಗುರಿ
  • ಮಹಿಳೆಯರಿಗೆ ೩ ಸಾವಿರ ಕೋಟಿಗೂ ಹೆಚ್ಚು ಅನುದಾನ
  • ದೇಶದಲ್ಲಿ ೧೨ ಹೊಸ ಇಂಡಸ್ಟ್ರೀಯಲ್‌ ಪಾರ್ಕ್‌ ಗಳ ನಿರ್ಮಾಣ
  • ಪ್ರಧಾನ ಮಂತ್ರಿ ಸೂರ್ಯೋಘರ್‌ ಉಚಿತ ವಿದ್ಯುತ್‌ ಯೋಜನೆ
  • ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದಿಂದ ಒತ್ತು
  • ೧೦೦ MW ವಾಣಿಜ್ಯ ಉಷ್ಣ ವಿದ್ಯುತ್‌ ಸ್ಥಾವರ ಸ್ಥಾಪನೆ
  • ಮೊಬೈಲ್‌ ಹಾಗೂ ಚಾರ್ಜರ್ಗಳ ಮೇಲಿನೆ ತೆರಿಗೆ ಇಳಿಕೆ
  • ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ ರಷ್ಟು ಇಳಿಕೆ
  • ಮೂರು ಕ್ಯಾನ್ಸರ್‌ ಔಷಧಿಗಳ ಮೇಲಿನ ಕಸ್ಟಮ್ಸ್‌ ಡ್ಯೂಟಿ ತೆರವು
  • ಸ್ಟ್ರೀಟ್‌ ಫುಡ್‌ ಹಬ್‌ ಸ್ಥಾಪನೆ
  • ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣ
  • ಇ ಕಾಮರ್ಸ್‌ ಮೇಲಿನ TDS ಇಳಿಕೆ
  • ಡಿಜಿಟಲ್‌ ಭೂ ಆಧಾರ್‌ ಯೋಜನೆ ಘೋಷಣೆ
  • ನೂರು ದೊಡ್ಡ ನಗರದಲ್ಲಿ ಸಂಸ್ಕರಿಸಿದ ನೀರಿನ ಘಟಕ
  • ಪ್ರವಾಹ ನಿಯಂತ್ರಣಕ್ಕೆ ೧೧೫೦೦ ಕೋಟಿ ಪ್ಯಾಕೇಜ್‌
  • ಸಣ್ಣ ಕೈಗಾರಿಕೆಗಳಿಗೆ ಬಡ್ಡಿ ರಹಿತ ಸಾಲ
  • ನಗರ ಪ್ರದೇಶದ ಬಡವರ ವಸತಿಗಾಗಿ ೧೦ ಲಕ್ಷ ಕೋಟಿ
  • ೪೦೦ ಜಿಲ್ಲೆಗಳಲ್ಲಿ ಡಿಜಿಟಲ್‌ ಬೆಳೆ ಸಮೀಕ್ಷೆ
  • ೨೬ ಸಾವಿರ ಕೋಟಿ ವೆಚ್ಚದಲ್ಲಿ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ
  • ಆಂಧ್ರಪ್ರದೇಶದ ಹೊಸ ರಾಜಧಾನಿಗೆ ೧೫೦೦೦ ಕೋಟಿ
  • ಮುದ್ರಾ ಸಾಲದ ಮಿತಿ ೨೦ ಲಕ್ಷಕ್ಕೆ ಹೆಚ್ಚಳ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

15 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

29 mins ago

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

1 hour ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

2 hours ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

5 hours ago