ದೇಶ- ವಿದೇಶ

2024-25ನೇ ಸಾಲಿನ ಕೇಂದ್ರ ಬಜೆಟ್ ಮುಖ್ಯಾಂಶಗಳು

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ೨೦೨೪ ಮತ್ತು ೨೫ ನೇ ಸಾಲಿನ ಬಜೆಟ್‌ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ೩ನೇ ಅವಧಿಯ ಮೊದಲ ಬಜೆಟ್‌ ಇದಾಗಿದ್ದು, ಇದೇ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್‌ ೭ ಬಾರಿ ಬಜೆಟ್‌ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇಂದಿನ ಬಜೆಟ್‌ ಮುಖ್ಯಾಂಶಗಳು

  • ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ ೧.೫೨ ಲಕ್ಷ ಕೋಟಿ
  • ಉದ್ಯೋಗ ಕೌಶಲ್ಯ ಅಭಿವೃದ್ಧಿಗೆ ೧.೪೮ ಲಕ್ಷ ಕೋಟಿ
  • ಗ್ರಾಮೀಣಾಭಿವೃದ್ಧಿಗೆ ೨.೬೬ ಲಕ್ಷ ಕೋಟಿ
  • ಶಿಕ್ಷಣ, ಉದ್ಯೋಗ ಕೌಶಲ್ಯಾಭಿವೃದ್ಧಿಗಾಗಿ ೧.೪೮ ಕೋಟಿ
  • ೩ ಲಕ್ಷದ ವರೆಗೆ ಯಾವುದೇ ರೀತಿಯ ತೆರಿಗೆ ಇಲ್ಲ
  • ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ೫ ವರ್ಷ ವಿಸ್ತರಣೆ
  • ವರ್ಷದಲ್ಲಿ ೧ ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ
  • ಉನ್ನತ್ತ ಶಿಕ್ಷಣಕ್ಕೆ ಸರ್ಕಾರದಿಂದ ೧೦ ಲಕ್ಷ ರೂ ವರೆಗೆ ಸಾಲ ಸೌಲಭ್ಯ
  • ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ
  • ೫ ವರ್ಷದಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
  • ಹೈದರಾಬಾದ್‌ ಬೆಂಗಳೂರು ಕೈಗಾರಿಕಾ ಕಾರಿಡಾರ್‌
  • ಎನ್‌ ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷವಾದ ಅನುದಾನ
  • ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶ
  • ಪಿಎಂ ಆವಾಸ್‌ ಯೋಜನೆಯಡಿ ೩ ಕೋಟಿ ಮನೆಗಳ ನಿರ್ಮಾಣ ಗುರಿ
  • ಮಹಿಳೆಯರಿಗೆ ೩ ಸಾವಿರ ಕೋಟಿಗೂ ಹೆಚ್ಚು ಅನುದಾನ
  • ದೇಶದಲ್ಲಿ ೧೨ ಹೊಸ ಇಂಡಸ್ಟ್ರೀಯಲ್‌ ಪಾರ್ಕ್‌ ಗಳ ನಿರ್ಮಾಣ
  • ಪ್ರಧಾನ ಮಂತ್ರಿ ಸೂರ್ಯೋಘರ್‌ ಉಚಿತ ವಿದ್ಯುತ್‌ ಯೋಜನೆ
  • ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದಿಂದ ಒತ್ತು
  • ೧೦೦ MW ವಾಣಿಜ್ಯ ಉಷ್ಣ ವಿದ್ಯುತ್‌ ಸ್ಥಾವರ ಸ್ಥಾಪನೆ
  • ಮೊಬೈಲ್‌ ಹಾಗೂ ಚಾರ್ಜರ್ಗಳ ಮೇಲಿನೆ ತೆರಿಗೆ ಇಳಿಕೆ
  • ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ ರಷ್ಟು ಇಳಿಕೆ
  • ಮೂರು ಕ್ಯಾನ್ಸರ್‌ ಔಷಧಿಗಳ ಮೇಲಿನ ಕಸ್ಟಮ್ಸ್‌ ಡ್ಯೂಟಿ ತೆರವು
  • ಸ್ಟ್ರೀಟ್‌ ಫುಡ್‌ ಹಬ್‌ ಸ್ಥಾಪನೆ
  • ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣ
  • ಇ ಕಾಮರ್ಸ್‌ ಮೇಲಿನ TDS ಇಳಿಕೆ
  • ಡಿಜಿಟಲ್‌ ಭೂ ಆಧಾರ್‌ ಯೋಜನೆ ಘೋಷಣೆ
  • ನೂರು ದೊಡ್ಡ ನಗರದಲ್ಲಿ ಸಂಸ್ಕರಿಸಿದ ನೀರಿನ ಘಟಕ
  • ಪ್ರವಾಹ ನಿಯಂತ್ರಣಕ್ಕೆ ೧೧೫೦೦ ಕೋಟಿ ಪ್ಯಾಕೇಜ್‌
  • ಸಣ್ಣ ಕೈಗಾರಿಕೆಗಳಿಗೆ ಬಡ್ಡಿ ರಹಿತ ಸಾಲ
  • ನಗರ ಪ್ರದೇಶದ ಬಡವರ ವಸತಿಗಾಗಿ ೧೦ ಲಕ್ಷ ಕೋಟಿ
  • ೪೦೦ ಜಿಲ್ಲೆಗಳಲ್ಲಿ ಡಿಜಿಟಲ್‌ ಬೆಳೆ ಸಮೀಕ್ಷೆ
  • ೨೬ ಸಾವಿರ ಕೋಟಿ ವೆಚ್ಚದಲ್ಲಿ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ
  • ಆಂಧ್ರಪ್ರದೇಶದ ಹೊಸ ರಾಜಧಾನಿಗೆ ೧೫೦೦೦ ಕೋಟಿ
  • ಮುದ್ರಾ ಸಾಲದ ಮಿತಿ ೨೦ ಲಕ್ಷಕ್ಕೆ ಹೆಚ್ಚಳ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

6 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago