ದೇಶ- ವಿದೇಶ

2024-25ನೇ ಸಾಲಿನ ಕೇಂದ್ರ ಬಜೆಟ್ ಮುಖ್ಯಾಂಶಗಳು

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ೨೦೨೪ ಮತ್ತು ೨೫ ನೇ ಸಾಲಿನ ಬಜೆಟ್‌ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ೩ನೇ ಅವಧಿಯ ಮೊದಲ ಬಜೆಟ್‌ ಇದಾಗಿದ್ದು, ಇದೇ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್‌ ೭ ಬಾರಿ ಬಜೆಟ್‌ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇಂದಿನ ಬಜೆಟ್‌ ಮುಖ್ಯಾಂಶಗಳು

  • ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ ೧.೫೨ ಲಕ್ಷ ಕೋಟಿ
  • ಉದ್ಯೋಗ ಕೌಶಲ್ಯ ಅಭಿವೃದ್ಧಿಗೆ ೧.೪೮ ಲಕ್ಷ ಕೋಟಿ
  • ಗ್ರಾಮೀಣಾಭಿವೃದ್ಧಿಗೆ ೨.೬೬ ಲಕ್ಷ ಕೋಟಿ
  • ಶಿಕ್ಷಣ, ಉದ್ಯೋಗ ಕೌಶಲ್ಯಾಭಿವೃದ್ಧಿಗಾಗಿ ೧.೪೮ ಕೋಟಿ
  • ೩ ಲಕ್ಷದ ವರೆಗೆ ಯಾವುದೇ ರೀತಿಯ ತೆರಿಗೆ ಇಲ್ಲ
  • ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ೫ ವರ್ಷ ವಿಸ್ತರಣೆ
  • ವರ್ಷದಲ್ಲಿ ೧ ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ
  • ಉನ್ನತ್ತ ಶಿಕ್ಷಣಕ್ಕೆ ಸರ್ಕಾರದಿಂದ ೧೦ ಲಕ್ಷ ರೂ ವರೆಗೆ ಸಾಲ ಸೌಲಭ್ಯ
  • ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ
  • ೫ ವರ್ಷದಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
  • ಹೈದರಾಬಾದ್‌ ಬೆಂಗಳೂರು ಕೈಗಾರಿಕಾ ಕಾರಿಡಾರ್‌
  • ಎನ್‌ ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷವಾದ ಅನುದಾನ
  • ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶ
  • ಪಿಎಂ ಆವಾಸ್‌ ಯೋಜನೆಯಡಿ ೩ ಕೋಟಿ ಮನೆಗಳ ನಿರ್ಮಾಣ ಗುರಿ
  • ಮಹಿಳೆಯರಿಗೆ ೩ ಸಾವಿರ ಕೋಟಿಗೂ ಹೆಚ್ಚು ಅನುದಾನ
  • ದೇಶದಲ್ಲಿ ೧೨ ಹೊಸ ಇಂಡಸ್ಟ್ರೀಯಲ್‌ ಪಾರ್ಕ್‌ ಗಳ ನಿರ್ಮಾಣ
  • ಪ್ರಧಾನ ಮಂತ್ರಿ ಸೂರ್ಯೋಘರ್‌ ಉಚಿತ ವಿದ್ಯುತ್‌ ಯೋಜನೆ
  • ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದಿಂದ ಒತ್ತು
  • ೧೦೦ MW ವಾಣಿಜ್ಯ ಉಷ್ಣ ವಿದ್ಯುತ್‌ ಸ್ಥಾವರ ಸ್ಥಾಪನೆ
  • ಮೊಬೈಲ್‌ ಹಾಗೂ ಚಾರ್ಜರ್ಗಳ ಮೇಲಿನೆ ತೆರಿಗೆ ಇಳಿಕೆ
  • ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ ರಷ್ಟು ಇಳಿಕೆ
  • ಮೂರು ಕ್ಯಾನ್ಸರ್‌ ಔಷಧಿಗಳ ಮೇಲಿನ ಕಸ್ಟಮ್ಸ್‌ ಡ್ಯೂಟಿ ತೆರವು
  • ಸ್ಟ್ರೀಟ್‌ ಫುಡ್‌ ಹಬ್‌ ಸ್ಥಾಪನೆ
  • ತೆರಿಗೆ ಪದ್ದತಿ ಮತ್ತಷ್ಟು ಸರಳೀಕರಣ
  • ಇ ಕಾಮರ್ಸ್‌ ಮೇಲಿನ TDS ಇಳಿಕೆ
  • ಡಿಜಿಟಲ್‌ ಭೂ ಆಧಾರ್‌ ಯೋಜನೆ ಘೋಷಣೆ
  • ನೂರು ದೊಡ್ಡ ನಗರದಲ್ಲಿ ಸಂಸ್ಕರಿಸಿದ ನೀರಿನ ಘಟಕ
  • ಪ್ರವಾಹ ನಿಯಂತ್ರಣಕ್ಕೆ ೧೧೫೦೦ ಕೋಟಿ ಪ್ಯಾಕೇಜ್‌
  • ಸಣ್ಣ ಕೈಗಾರಿಕೆಗಳಿಗೆ ಬಡ್ಡಿ ರಹಿತ ಸಾಲ
  • ನಗರ ಪ್ರದೇಶದ ಬಡವರ ವಸತಿಗಾಗಿ ೧೦ ಲಕ್ಷ ಕೋಟಿ
  • ೪೦೦ ಜಿಲ್ಲೆಗಳಲ್ಲಿ ಡಿಜಿಟಲ್‌ ಬೆಳೆ ಸಮೀಕ್ಷೆ
  • ೨೬ ಸಾವಿರ ಕೋಟಿ ವೆಚ್ಚದಲ್ಲಿ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ
  • ಆಂಧ್ರಪ್ರದೇಶದ ಹೊಸ ರಾಜಧಾನಿಗೆ ೧೫೦೦೦ ಕೋಟಿ
  • ಮುದ್ರಾ ಸಾಲದ ಮಿತಿ ೨೦ ಲಕ್ಷಕ್ಕೆ ಹೆಚ್ಚಳ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

13 mins ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

2 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

4 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

4 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

6 hours ago