ದೇಶ- ವಿದೇಶ

ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ ನಿರ್ಮಲಾ ಸೀತಾರಾಮನ್

ನವದೆಹಲಿ : ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್‌ ನಲ್ಲಿ ೩ ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಹೇಳುವ ಮೂಲಕ ಹಣಕಾಸು ಸಚಿವೆ  ನಿರ್ಮಾಲಾ ಸೀತಾರಾಮನ್‌ ಮಹಿಳಾ ವಲಯಕ್ಕೆ ಬಂಪರ್‌ ಕೊಡುಗೆ ನೀಡಿದ್ದಾರೆ.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರ ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದರು.

೨೦೨೪ -೨೫ರ ಕೇಂದ್ರ ಬಜೆಟ್‌ ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ ೩ ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್‌ ಗಳನ್ನು ನಿರ್ಮಿಸಲಿದೆ. ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್‌ ಕೇಂದ್ರಿಕರಿಸುತ್ತದೆ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

7 mins ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

16 mins ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

23 mins ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

29 mins ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

11 hours ago