ದೇಶ- ವಿದೇಶ

ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ ನಿರ್ಮಲಾ ಸೀತಾರಾಮನ್

ನವದೆಹಲಿ : ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್‌ ನಲ್ಲಿ ೩ ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಹೇಳುವ ಮೂಲಕ ಹಣಕಾಸು ಸಚಿವೆ  ನಿರ್ಮಾಲಾ ಸೀತಾರಾಮನ್‌ ಮಹಿಳಾ ವಲಯಕ್ಕೆ ಬಂಪರ್‌ ಕೊಡುಗೆ ನೀಡಿದ್ದಾರೆ.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರ ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದರು.

೨೦೨೪ -೨೫ರ ಕೇಂದ್ರ ಬಜೆಟ್‌ ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ ೩ ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್‌ ಗಳನ್ನು ನಿರ್ಮಿಸಲಿದೆ. ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್‌ ಕೇಂದ್ರಿಕರಿಸುತ್ತದೆ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago