rahulgandhi
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ರಷ್ಯಾದಿಂದ ತೈಲ ಖರೀದಿಸಬೇಕಾ ಅಥವಾ ಬೇಡಾ ಎಂಬ ಕುರಿತು ನಿರ್ಧರಿಸಲು ಮತ್ತು ಘೋಷಿಸಲು ಅವರು ಅಮೆರಿಕ ನಾಯಕರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ತಮ್ಮ ಸ್ನೇಹಿತ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂಬ ಸಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯ ಬೆನ್ನಲ್ಲೇ ಈ ಟೀಕೆ ವ್ಯಕ್ತವಾಗಿದೆ.
ಇದನ್ನೂ ಓದಿ:-ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ
ಮೋದಿ ಅವರು ಟ್ರಂಪ್ ಬಗ್ಗೆ ಭಯ ಹೊಂದಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ನಿರ್ಧರಿಸಲು ಮತ್ತು ಘೋಷಿಸಲು ಟ್ರಂಪ್ಗೆ ಅವಕಾಶ ನೀಡುತ್ತಿದ್ದಾರೆ. ಪದೇ ಪದೇ ತಿರಸ್ಕಾರದ ಹೊರತಾಗಿಯೂ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಲೇ ಇರುತ್ತಾರೆ. ಅಮೆರಿಕಕ್ಕೆ ಹಣಕಾಸು ಸಚಿವರ ಭೇಟಿಯನ್ನು ರದ್ದುಗೊಳಿಸಲಾಗಿದೆ. ಶರ್ಮ್ ಎಲ್ ಶೇಖ್ ಅವರನ್ನು ಬಿಟ್ಟುಬಿಡಲಾಗಿದೆ. ಆಪರೇಷನ್ ಸಿಂಧೂರ್ ಬಗ್ಗೆ ಅವರ ಹೇಳಿಕೆಯನ್ನು ವಿರೋಽಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.
ಟ್ರಂಪ್ ಹೇಳಿದ್ದೇನು?
ಬುಧವಾರ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತ ರಷ್ಯಾದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕೆ ಅಮೆರಿಕ ಸಂತೋಷವಾಗಿಲ್ಲ. ಈ ಖರೀದಿಯು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಯುದ್ಧಕ್ಕೆ ಹಣಕಾಸು ಒದಗಿಸಲು ಸಹಾಯ ಮಾಡಿದೆ. ನನ್ನ ಸ್ನೇಹಿತ, ನಮ್ಮ ನಡುವೆ ಉತ್ತಮ ಸಂಬಂಧವಿದೆ. ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ನನಗೆ ಭರವಸೆ ನೀಡಿದರು. ಅದು ಒಂದು ದೊಡ್ಡ ಹೆಜ್ಜೆ. ಈಗ ನಾವು ಚೀನಾವನ್ನು ಅದೇ ರೀತಿ ಮಾಡಬೇಕಾಗಿದೆ ಎಂದು ತಿಳಿಸಿದ್ದರು.
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…