rahulgandhi
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ರಷ್ಯಾದಿಂದ ತೈಲ ಖರೀದಿಸಬೇಕಾ ಅಥವಾ ಬೇಡಾ ಎಂಬ ಕುರಿತು ನಿರ್ಧರಿಸಲು ಮತ್ತು ಘೋಷಿಸಲು ಅವರು ಅಮೆರಿಕ ನಾಯಕರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ತಮ್ಮ ಸ್ನೇಹಿತ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂಬ ಸಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯ ಬೆನ್ನಲ್ಲೇ ಈ ಟೀಕೆ ವ್ಯಕ್ತವಾಗಿದೆ.
ಇದನ್ನೂ ಓದಿ:-ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ
ಮೋದಿ ಅವರು ಟ್ರಂಪ್ ಬಗ್ಗೆ ಭಯ ಹೊಂದಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ನಿರ್ಧರಿಸಲು ಮತ್ತು ಘೋಷಿಸಲು ಟ್ರಂಪ್ಗೆ ಅವಕಾಶ ನೀಡುತ್ತಿದ್ದಾರೆ. ಪದೇ ಪದೇ ತಿರಸ್ಕಾರದ ಹೊರತಾಗಿಯೂ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಲೇ ಇರುತ್ತಾರೆ. ಅಮೆರಿಕಕ್ಕೆ ಹಣಕಾಸು ಸಚಿವರ ಭೇಟಿಯನ್ನು ರದ್ದುಗೊಳಿಸಲಾಗಿದೆ. ಶರ್ಮ್ ಎಲ್ ಶೇಖ್ ಅವರನ್ನು ಬಿಟ್ಟುಬಿಡಲಾಗಿದೆ. ಆಪರೇಷನ್ ಸಿಂಧೂರ್ ಬಗ್ಗೆ ಅವರ ಹೇಳಿಕೆಯನ್ನು ವಿರೋಽಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.
ಟ್ರಂಪ್ ಹೇಳಿದ್ದೇನು?
ಬುಧವಾರ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತ ರಷ್ಯಾದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕೆ ಅಮೆರಿಕ ಸಂತೋಷವಾಗಿಲ್ಲ. ಈ ಖರೀದಿಯು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಯುದ್ಧಕ್ಕೆ ಹಣಕಾಸು ಒದಗಿಸಲು ಸಹಾಯ ಮಾಡಿದೆ. ನನ್ನ ಸ್ನೇಹಿತ, ನಮ್ಮ ನಡುವೆ ಉತ್ತಮ ಸಂಬಂಧವಿದೆ. ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ನನಗೆ ಭರವಸೆ ನೀಡಿದರು. ಅದು ಒಂದು ದೊಡ್ಡ ಹೆಜ್ಜೆ. ಈಗ ನಾವು ಚೀನಾವನ್ನು ಅದೇ ರೀತಿ ಮಾಡಬೇಕಾಗಿದೆ ಎಂದು ತಿಳಿಸಿದ್ದರು.
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…