ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಇಂದು(ಜೂ.6) ಬೆಳಿಗ್ಗೆಯಿಂದಲೇ ದೆಹಲಿಯ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಎನ್ಡಿಎ ಸಂಸದೀಯ ಪಕ್ಷದ ಸಭೆ ಆರಂಭವಾಗಿದ್ದು, ಎನ್ಡಿಎ ಮಿತ್ರ ಪಕ್ಷಗಳ ನಾಯಕರೆಲ್ಲರೂ ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಪ್ರಲ್ಹಾದ ಜೋಶಿ, ಭಾನುವಾರ ಸಂಜೆ 6 ಕ್ಕೆ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.
ಸಭೆಯಲ್ಲಿ ಜೆ.ಪಿ ನಡ್ಡಾ ಎನ್ಡಿಎ ನಾಯಕರಾಗಿ ನರೇಂದ್ರ ಮೋದಿ ಹೆಸರನ್ನು ಪ್ರಸ್ತಾಪಿಸಲಿದ್ದಾರೆ. ಈ ವೇಳೆ ಒಕ್ಕೂಟದ ನಾಯಕರು ಬೆಂಬಲ ಸೂಚಿಸಲಿದ್ದಾರೆ.
ಇನ್ನೂ ಎನ್ಡಿಎ ಮಿತ್ರ ಪಕ್ಷಗಳು ಇಂದೇ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನುಬೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕುಪತ್ರ ಮಂಡಿಸುವ ಸಾಧ್ಯತೆ ಇದೆ. ಈ ವೇಳೆ ಮಿತ್ರ ಪಕ್ಷಗಳ ಬೆಂಬಲದ ಪಟ್ಟಿಯನ್ನು ಸಹ ರಾಷ್ಟ್ರಪತಿಗಳಿಗೆ ಸಲ್ಲಿಸಲಿದ್ದಾರೆ.
೫೪೩ ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮಿತ್ರಕೂಟ ೨೯೩ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…