ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಇಂದು(ಜೂ.6) ಬೆಳಿಗ್ಗೆಯಿಂದಲೇ ದೆಹಲಿಯ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಎನ್ಡಿಎ ಸಂಸದೀಯ ಪಕ್ಷದ ಸಭೆ ಆರಂಭವಾಗಿದ್ದು, ಎನ್ಡಿಎ ಮಿತ್ರ ಪಕ್ಷಗಳ ನಾಯಕರೆಲ್ಲರೂ ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಪ್ರಲ್ಹಾದ ಜೋಶಿ, ಭಾನುವಾರ ಸಂಜೆ 6 ಕ್ಕೆ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.
ಸಭೆಯಲ್ಲಿ ಜೆ.ಪಿ ನಡ್ಡಾ ಎನ್ಡಿಎ ನಾಯಕರಾಗಿ ನರೇಂದ್ರ ಮೋದಿ ಹೆಸರನ್ನು ಪ್ರಸ್ತಾಪಿಸಲಿದ್ದಾರೆ. ಈ ವೇಳೆ ಒಕ್ಕೂಟದ ನಾಯಕರು ಬೆಂಬಲ ಸೂಚಿಸಲಿದ್ದಾರೆ.
ಇನ್ನೂ ಎನ್ಡಿಎ ಮಿತ್ರ ಪಕ್ಷಗಳು ಇಂದೇ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನುಬೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕುಪತ್ರ ಮಂಡಿಸುವ ಸಾಧ್ಯತೆ ಇದೆ. ಈ ವೇಳೆ ಮಿತ್ರ ಪಕ್ಷಗಳ ಬೆಂಬಲದ ಪಟ್ಟಿಯನ್ನು ಸಹ ರಾಷ್ಟ್ರಪತಿಗಳಿಗೆ ಸಲ್ಲಿಸಲಿದ್ದಾರೆ.
೫೪೩ ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮಿತ್ರಕೂಟ ೨೯೩ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…