ನವದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮ ಮತ್ತು ಯುಜಿಸಿ-ನೆಟ್ ಪರೀಕ್ಷೆ ರದ್ದು ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿರು.
ಪ್ರಧಾನಿ ಮೋದಿ ಜಿ ಉಕ್ರೇನ್-ರಷ್ಯಾ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ ಅವರಿಂದ ಭಾರತದಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗಿಲ್ಲ ಅಥವಾ ನಿಲ್ಲಿಸಲು ಬಯಸುವುದಿಲ್ಲ ಎಂದು ರಾಹುಲ್ ಇಂದು(ಜೂ.20) ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.
ಭಾರತದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರ್ಎಸ್ಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ಳುತ್ತಿದ್ದು, ಇದನ್ನು ಬದಲಾಯಿಸದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲುವುದಿಲ್ಲ ಎಂದು ಪ್ರತಿಪಾದಿಸಿದರು.
ನಿರಂಕುಶವಾಗಿ ಏನನ್ನೂ ಮಾಡಬಾರದು. ಪ್ರತಿ ಪತ್ರಿಕೆಗೂ ಒಂದೇ ನಿಯಮ ಇರಬೇಕು. ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಪ್ರತಿಪಕ್ಷಗಳ ಸಂಸತ್ತಿನಲ್ಲಿ ಪ್ರಸ್ತಾಪಿಸಲಿವೆ ಎಂದರು.
ಪ್ರಸ್ತುತ ಲೋಕಸಭಾ ಚುನಾವಣೆಯ ನಂತರ ಮೋದಿ ಅವರು ಮಾನಸಿಕವಾಗಿ ಕುಸಿದಿದ್ದಾರೆ. ಹೀಗಾಗಿ ಸರ್ಕಾರ ನಡೆಸಲು ಹೆಣಗಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…