ದೇಶ- ವಿದೇಶ

ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಚೀನಾ ಪ್ರವಾಸ ಸಾಧ್ಯತೆ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ.

ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ ನಡುವಿನ ಸಂಬಂಧಗಳನ್ನು ಸುಧಾರಿಸಲು ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲೇ ಮೋದಿ ಚೀನಾ ಪ್ರವಾಸ ವಿಶ್ವದ ಗಮನ ಸೆಳೆದಿದೆ.

ವಿದೇಶಾಂಗ ಸಚಿವ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಪ್ರಧಾನಿ ಮೋದಿ ಅವರು ಜಪಾನ್ ಮತ್ತು ನಂತರ ಶೃಂಗಸಭೆಗಾಗಿ ಚೀನಾಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2020ರ ಗಾಲ್ವಾನ್ ಕಣಿವೆ ಘರ್ಷಣೆ ಬಳಿಕ ಕಹಿಯಾಗಿದ್ದ ಭಾರತ ಚೀನಾ ನಡುವಿನ ಸಂಬಂಧ ಇದೀಗ ಸಿಹಿಯಾಗಲು ಪ್ರಾರಂಭವಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ ಅಂತ್ಯದಲ್ಲಿ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್‍ಗೆ ಭೇಟಿ ನೀಡಬಹುದು. ಇದರ ನಂತರ, ಪ್ರಧಾನಿ ಶಾಂಘೈ ಸಹಕಾರ ಸಂಸ್ಥೆ ನಲ್ಲಿ ಭಾಗವಹಿಸಲು ಚೀನಾಕ್ಕೂ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಭಾಗವಹಿಸಿದರೆ, ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಬಹುದು. ಕಜನ್ ಬ್ರಿಕ್ಸ್ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಕೊನೆಯ ಬಾರಿಗೆ ಭೇಟಿಯಾಗಿದ್ದರು.‌ ಅಂದಿನಿಂದ, ಎರಡೂ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸಲು ಪ್ರಯತ್ನಗಳನ್ನು ಪ್ರಾರಂಭಿಸಲಾಯಿತು.

ಮೋದಿ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷರು ಸೇರಿದಂತೆ ಇತರ ಎಸ್‍ಸಿಒ ನಾಯಕರನ್ನು ಸಹ ಭೇಟಿಯಾಗಬಹುದು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

21 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago