ಢಾಕಾ: ನೊಬೆಲ್ ಶಾಂತಿ ಪುರಸ್ಕೃತ ಹಾಗೂ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿದ್ದ ಮೊಹಮ್ಮದ್ ಯೂನುಸ್ರನ್ನು ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ.
ಬಾಂಗ್ಲಾದೇಶದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ಹಿಂದು ದೇವಾಲಯಗಳೇ ಸಂಘಟನೆಗಳ ಟಾರ್ಗೆಟ್ ಆಗಿವೆ. ಅಲ್ಲಿ ಹಲವು ಹಿಂದು ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ.
ಈ ಬೆನ್ನಲ್ಲೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮೊಹಮ್ಮದ್ ಯೂನುಸ್ ಅವರನ್ನು ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದರು.
ಸಂಸತ್ತನ್ನ ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು, 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರದ ರಚನೆ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಯೂನುಸ್ ಅವರಿಗೆ ಅಧಿಕಾರ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಶಹಾಬುದ್ದೀನ್ ಅವರು ಇಂದು ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.
ಈ ಮೂಲಕ ಯೂನುಸ್ ಅವರಿಗೆ ಬಾಂಗ್ಲಾದೇಶದ ಸೇನೆ ಬೆಂಬಲ ನೀಡಿದ್ದರಿಂದ ಸದ್ಯ ತಲೆದೋರಿರುವ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದಂತಾಗಿದೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…