ದೇಶ- ವಿದೇಶ

ಹಣ ವಂಚನೆ: ನಕಲಿ ನೋಟಿನಲ್ಲಿ ನಟ ಅನುಪಮ್‌ ಖೇರ್‌ ಫೋಟೋ

ಮೈಸೂರು: ಗುಜರಾತ್‌ನ ಚಿನ್ನಾಭರಣ ವ್ಯಾಪಾರಸ್ಥರೊಬ್ಬರಿಗೆ ವಂಚಕರು 500 ರೂ. ಮುಖಬೆಲೆಯ 1.3ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಈ ವಂಚನೆ ಪ್ರಕರಣದ ಪ್ರಮುಖ ವಿಶೇಷವೆಂದರೆ ವ್ಯಾಪಾರಸ್ಥರಿಗೆ ವಂಚಕರು ನೀಡಿದ್ದ 500 ರೂ. ಮುಖಬೆಲೆಯ 1.3ಕೋಟಿ ಮೌಲ್ಯದ ನಕಲಿ ನೋಟುಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವಿರದೇ ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ಚಿತ್ರವಿದೆ. ಸದ್ಯ, ಈ ನೋಟುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಚಿನ್ನಾಭರಣ ವ್ಯಾಪಾರಸ್ಥರ ಹತ್ತಿರ 2 ಕೆ.ಜಿ.ಚಿನ್ನ ಖರೀದಿ ಒಪ್ಪಂದ ಮಾಡಿಕೊಂಡಿದ್ದ ವಂಚಕರು 1.3 ಕೋಟಿ ರೂ. ನಗದು ಹಣ ಇದೆ ಎಂದು ಹೇಳಿ ಹಣದ ಬ್ಯಾಗ್‌ನ್ನು ನೀಡಲು ಬಂದಿದ್ದರು. ಆದರೆ ವಂಚಕರು ನಕಲಿ ನೋಟುಗಳ ಜೊತೆಗೆ ಅನೇಕ ಅಸಲಿ ನೋಟುಗಳನ್ನು ಮೇಲ್ಭಾಗ ತೋರಿಕೆಗಾಗಿ ಇಟ್ಟಿದ್ದರು. ಇದೇ ವೇಳೆಗೆ ವ್ಯಾಪಾರಸ್ಥರ ನಂಬಿಕೆಗಳಿಸಿದ್ದ ವಂಚಕರು ಇನ್ನೊಂದು ಅಂಗಡಿ ಹತ್ತಿರ ಚಿನ್ನ ಖರೀದಿಸಬೇಕಿದೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಬ್ಯಾಗ್‌ನಲ್ಲಿದ್ದ ಹಣವನ್ನು ತಕ್ಷಣವೇ ಯಂತ್ರದ ಸಹಾಯದಿಂದ ಎಣಿಸಲು ಹೋದಾಗ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್‌ ಖೇರ್‌ ಮುಖಬೆಲೆಯ ನೋಟುಗಳನ್ನು ಇಡಲಾಗಿದೆ ಎಂಬ ಅಸಲಿ ಸತ್ಯ ಗೊತ್ತಾಗಿ ಆಶ್ಚರ್ಯಗೊಂಡ ವ್ಯಾಪಾರಸ್ಥನು, ನವರಂಗ್‌ಪುರ ಪೊಲೀಸ್‌ ಠಾಣೆಗೆ ವಂಚಕರ ವಿರುದ್ಧ ದೂರು ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ವಂಚಕರ ವಿರುದ್ಧ ದೂರು ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದೇನೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

3 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

30 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago